Slide
Slide
Slide
previous arrow
next arrow

ಇಂದು ಬೈಲೂರಿನಲ್ಲಿ ‘ಜನರ ಬಳಿಗೆ ಸಚಿವ ಮಂಕಾಳ್ ವೈದ್ಯರ ನಡಿಗೆ’

300x250 AD

ಭಟ್ಕಳ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಜನ ಸ್ಪಂದನಾ ಸಭೆ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿದ್ದು ಈ ನಿಟ್ಟಿನಲ್ಲಿ ಪ್ರಥಮ ಸಭೆಯು ಇಂದು (ಮಂಗಳವಾರ) ತಾಲ್ಲೂಕಿನ ಬೈಲೂರಿನಲ್ಲಿ ನಡೆಸಿಕೊಡಲಿದ್ದಾರೆ ಎಂದು ಭಟ್ಕಳ ಬ್ಲಾಕ್ ಕಾಂಗ್ರೆಸ ಸಮಿತಿ ಅಧ್ಯಕ್ಷ ವೆಂಕಟೇಶ ನಾಯ್ಕ ತಿಳಿಸಿದ್ದಾರೆ.

ಬೈಲೂರು ಗ್ರಾಮ ಪಂಚಾಯತ ವ್ಯಾಪ್ತಿಯ ತೆಂಗಾರದ ಸಿದ್ದಿವಿನಾಯಕ ಸಭಾಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಭಟ್ಕಳ ವಿಧಾನಸಭಾ ಕ್ಷೇತ್ರದ ಗ್ರಾಮದಲ್ಲಿರುವ ಕುಂದು-ಕೊರತೆಗಳನ್ನ ಆಲಿಸಿ ಪರಿಹರಿಸುವುದಕ್ಕಾಗಿ, ಮೀನುಗಾರಿಕಾ ಬಂದರು ಒಳನಾಡು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆಯಾ ಪಂಚಾಯತ ವ್ಯಾಪ್ತಿಯಲ್ಲಿ ಜನ ಸ್ಪಂದನಾ ಸಭೆಯನ್ನು ನಡೆಸಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಿಹಾರ ಮತ್ತು ಸಾರ್ವಜನಿಕರು ತಮ್ಮ ಪಂಚಾಯತಗೆ ನಿಗದಿಪಡಿಸಿದ ದಿನಾಂಕದಂದು ತಮ್ಮ ಊರಿನ ಕುಂದು-ಕೊರತೆಯ ಬಗೆಗೆ ಸಚಿವರಿಗೆ ತಿಳಿಸಿ ಸಮಸ್ಯೆಯನ್ನ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top