Slide
Slide
Slide
previous arrow
next arrow

ಡಿಪಿಎಲ್ ಕ್ರಿಕೆಟ್ ಪಂದ್ಯಾವಳಿ: ವೆಸ್ಟ್ ಕೋಸ್ಟ್ ಕಾರ್ಖಾನೆಯಿಂದ ಧನಸಹಾಯ

300x250 AD

ದಾಂಡೇಲಿ: ದಾಂಡೇಲಿ ಪ್ರೀಮಿಯರ್ ಲೀಗ್ ಸಮಿತಿಯ ಆಶ್ರಯದಡಿ ಇದೇ ಬರುವ ಫೆಬ್ರವರಿ 9 ರಿಂದ ಫೆ:11ರವರೆಗೆ ನಡೆಯಲಿರುವ ದಾಂಡೇಲಿ ಪ್ರೀಮಿಯರ್ ಲೀಗ್ ಸೀಸನ್: 3 ಹೊನಲು ಬೆಳಕಿನ ಪಂದ್ಯಾವಳಿಗೆ ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯು ರೂ.50 ಸಾವಿರ ಹಣವನ್ನು ಕೊಡುಗೆಯಾಗಿ ನೀಡಿದೆ.

ನಗರದ ಸಂತೋಷ್ ಹೋಟೆಲ್ ಸಭಾಭವನದಲ್ಲಿ ಮಂಗಳವಾರ ವೆಸ್ಟ್ ಕೋಸ್ಟ್ ಆಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿಯವರು ರೂ:50 ಸಾವಿರ ಮೊತ್ತದ ಚೆಕ್’ನ್ನು ದಾಂಡೇಲಿ ಪ್ರೀಮಿಯರ್ ಲೀಗ್ ಸಮಿತಿಯ ಅಧ್ಯಕ್ಷರಾದ ವಿಷ್ಣುಮೂರ್ತಿ ರಾವ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜೇಶ್ ತಿವಾರಿಯವರು ದಾಂಡೇಲಿ ಪ್ರೀಮಿಯರ್ ಲೀಗ್ ಅತ್ಯಂತ ವೈಶಿಷ್ಟ್ಯ ಪೂರ್ಣವಾಗಿ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. ಈ ಪಂದ್ಯಾವಳಿಯ ಯಶಸ್ಸಿಗಾಗಿ ಕಾಗದ ಕಾರ್ಖಾನೆ ರೂ: 50 ನಗದು ಮೊತ್ತವನ್ನು ನೀಡುತ್ತಿದೆ. ಪಂದ್ಯಾವಳಿ ಯಶಸ್ವಿಯಾಗಿ ನಡೆಯಲೆಂದು ಶುಭವನ್ನು ಕೋರಿದರು.

300x250 AD

ಈ ಸಂದರ್ಭದಲ್ಲಿ ಮಾತನಾಡಿದ ದಾಂಡೇಲಿ ಪ್ರೀಮಿಯರ್ ಲೀಗ್ ಸಮಿತಿಯ ಅಧ್ಯಕ್ಷರಾದ ವಿಷ್ಣುಮೂರ್ತಿ ರಾವ್ ಹಾಗೂ ವಕ್ತಾರ ಇಮಾಮ್ ಸರ್ವರ್ ಅವರು ಈ ಪಂದ್ಯಾವಳಿಯ ಯಶಸ್ಸಿಗೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ತುಂಬು ಹೃದಯದ ಸಹಕಾರವನ್ನು ನೀಡಿರುವುದು ಸಂತಸ ತಂದಿದೆ. ಅದೇ ರೀತಿಯಲ್ಲಿ ದಾನಿಗಳು, ಕ್ರೀಡಾಭಿಮಾನಿಗಳು ಪಂದ್ಯಾವಳಿಯ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಪಂದ್ಯಾವಳಿಯನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸುವಂತೆ ಮನವಿಯನ್ನು ಮಾಡಿದರು.

ಈ ಸಂದರ್ಭದಲ್ಲಿ ದಾಂಡೇಲಿ ಪ್ರೀಮಿಯರ್ ಲೀಗ್ ಚೇರ್ಮನ್ ಕುಲದೀಪ್ ಸಿಂಗ್ ರಜಪೂತ್, ಸಮಿತಿಯ ಪ್ರಮುಖರುಗಳಾದ ಪ್ರಮೋದ್ ಕದಂ, ಶಮಲ್ ಅಬ್ದುಲ್ಲ, ಅತುಲ್ ಮಾಡ್ದೋಳ್ಕರ್, ಸಂದೀಪ್ ರಜಪೂತ್‌ ಮೊದಲಾದವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top