Slide
Slide
Slide
previous arrow
next arrow

ಫೆ.9ಕ್ಕೆ ಜಡ್ಡಿಗದ್ದೆಯಲ್ಲಿ ಶಾಸಕರಿಗೆ ಅಭಿನಂದನಾ ಸಮಾರಂಭ

300x250 AD

ಶಿರಸಿ: ತಾಲೂಕಿನ ಕೊಡ್ನಗದ್ದೆ ಪಂಚಾಯತದ ಸಮಸ್ತ ಊರ ನಾಗರಿಕರಿಂದ ಫೆ.9,ಶುಕ್ರವಾರದಂದು ‘ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ’ವು ಶ್ರೀ ಮಹಾಗಣಪತಿ ದೇವಸ್ಥಾನದ ಎದುರುಗಡೆಯ ಆವರಣ, ಜಡ್ಡಿಗದ್ದೆಯಲ್ಲಿ ನಡೆಯಲಿದೆ. ಶ್ರೀ ಬಾಲಾಜಿ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಕಾರ್ಯಕ್ರಮ ನಡೆಯುವ ಸ್ಥಳವಾದ ಶ್ರೀ ಮಹಾಗಣಪತಿ ದೇವಸ್ಥಾನದವರೆಗೆ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಈಶ ಗೌಡ ತಂಡದವರಿಂದ ಡೊಳ್ಳು ಕುಣಿತ ಹಾಗೂ ಶ್ರೀ ಸಿದ್ಧಿವಿನಾಯಕ ಕಲಾ ಸಂಘ ಗದ್ದೆಹಳ್ಳಿ ಇವರಿಂದ ದಮಾಮಿ ಕುಣಿತ ಮೆರವಣಿಗೆ ಪ್ರಾರಂಭಗೊಳ್ಳುವುದು.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಭೀಮಣ್ಣ ಟಿ. ನಾಯ್ಕ ಆಗಮಿಸಲಿದ್ದು, ಟಿ. ಎಸ್. ಎಸ್.ಉಪಾಧ್ಯಕ್ಷ ಮಾಬ್ಲೇಶ್ವರ ಎನ್. ಭಟ್ಟ ತೋಟಿಮನೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಗದೀಶ ಗೌಡ,ಮಾಜಿ ಜಿ. ಪಂ. ಸದಸ್ಯ ಜಿ. ಎನ್. ಹೆಗಡೆ ಮುರೇಗಾರ, ಎಮ್. ಎಮ್. ಕಲಾ ಮತ್ತು ವಿಜ್ಞಾನ ಕಾಲೇಜು ಉಪಸಮಿತಿ ಅಧ್ಯಕ್ಷ ಎಸ್. ಕೆ. ಭಾಗವತ, ವಾನಳ್ಳಿ ಸೊಸೈಟಿ ಅಧ್ಯಕ್ಷ ಎನ್.ಎಸ್.ಹೆಗಡೆ, ಕೋಟಿಕೊಪ್ಪ, ವಾನಳ್ಳಿ ಸೊಸೈಟಿ ಉಪಾಧ್ಯಕ್ಷ ವಿ.ಆರ್.ಹೆಗಡೆ ಮಣ್ಮನೆ, ಕಾಂಗ್ರೆಸ್ ಘಟಕಾಧ್ಯಕ್ಷ ಮಂಜುನಾಥ ಜಿ. ಭಟ್, ಕಾಂಗ್ರೆಸ್ ಮುಖಂಡ ಎಸ್. ಎಸ್. ಭಟ್, ಮಾಜಿ ಗ್ರಾ. ಪಂ. ಅಧ್ಯಕ್ಷ ಶ್ರೀಮತಿ ಆಶಾ ಮಂಜುನಾಥ ಗೌಡ, ಕೊಡ್ನಗದ್ದೆ ಗ್ರಾಮ ಪಂಚಾಯತ ಅಧ್ಯಕ್ಷ ರಾಘವೇಂದ್ರ ಹೆಗಡೆ, ಉ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗ ಅಧ್ಯಕ್ಷ ಶ್ರೀನಿವಾಸ ಜೆ. ನಾಯ್ಕ ಇವರುಗಳ ಗೌರವ ಉಪಸ್ಥಿತಿ ಇರಲಿದೆ. ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಸನ್ಮಾನವನ್ನು ಏರ್ಪಡಿಸಲಾಗಿದ್ದು, ಈ ಅಭಿನಂದನಾ ಕಾರ್ಯಕ್ರಮಕ್ಕೆ ಜಡ್ಡಿಗದ್ದೆ (ಕೊಡ್ನಗದ್ದೆ) ಪಂಚಾಯತ ವ್ಯಾಪ್ತಿಯ ಗೌರವಾನ್ವಿತ ಮುಖಂಡರು, ಸಮಸ್ತರ ಊರನಾಗರಿಕರು ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗಹಿಸಿ ಚೆಂದಗಾಣಿಸಿಕೊಡಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top