Slide
Slide
Slide
previous arrow
next arrow

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

300x250 AD

ದಾಂಡೇಲಿ : ನಗರದ ಸಮೀಪದಲ್ಲಿರುವ ಜನತಾ ಕಾಲೋನಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಜನತಾ ಕಾಲೋನಿಯ‌‌ ನಿವಾಸಿ 50 ವರ್ಷ ವಯಸ್ಸಿನ ಲಕ್ಷ್ಮಣ ಬಾಳಪ್ಪಾ ಮೇದಾರ ಎಂಬವರು ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.  ಪಣಸೋಲಿ – ಉಳವಿ ಕ್ರಾಸ್ ಹತ್ತಿರ ಇರುವ ಹಳ್ಳದಲ್ಲಿ ಗುರುವಾರ ತಡರಾತ್ರಿ ಲಕ್ಷ್ಮಣ ಬಾಳಪ್ಪಾ ಮೇದಾರ ಅವರ ಮೃತ ದೇಹ ಪತ್ತೆಯಾಗಿದೆ.

300x250 AD

ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸ್ಐ ಜಗದೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಮೃತ ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ‌ ತಂದು ಮರಣೋತ್ತರ ಪರೀಕ್ಷೆಯನ್ನು ನಡೆಸಿ, ಆನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

Share This
300x250 AD
300x250 AD
300x250 AD
Back to top