Slide
Slide
Slide
previous arrow
next arrow

ಸುಬ್ರಹ್ಮಣ್ಯ ಸ್ವಾಮಿ ದೇವರ ಪ್ರತಿಷ್ಠಾಪನೆಯ ನಿಮಿತ್ತ ಭವ್ಯ ಶೋಭಾಯಾತ್ರೆ

300x250 AD

ದಾಂಡೇಲಿ: ನಗರದ ಬಸವೇಶ್ವರನಗರದಲ್ಲಿ ಶ್ರೀ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿ ದೇವರ ಪ್ರತಿಷ್ಠಾಪನಾ ಕಾರ್ಯಕ್ರಮದ ನಿಮಿತ್ತವಾಗಿ ಮಂಗಳವಾರ ಸಂಜೆ ಗಾಂಧಿನಗರದ ಶ್ರೀ ವಿಘ್ನೇಶ್ವರ ಮಾರುತಿ ದೇವಸ್ಥಾನದಿಂದ ಬಸವೇಶ್ವರನಗರದ ಶ್ರೀ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದವರೆಗೆ ಶ್ರೀ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿಯ ಭವ್ಯ ಶೋಭಾಯಾತ್ರೆಯು ಜರುಗಿತು.

ಚೇತನ್ ಭಟ್ ಪೌರೋಹಿತ್ಯದಲ್ಲಿ ಶೋಭಾಯಾತ್ರೆಯ ಮುನ್ನ ಪೂಜಾ ಕಾರ್ಯಕ್ರಮವು ಜರುಗಿತು. ಭವ್ಯ ಶೋಭಾಯಾತ್ರೆಯಲ್ಲಿ ಶ್ರೀಪ್ರಸನ್ನ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸ್ಥಳಿಯ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬುಧವಾರದಿಂದ ಗುರುವಾರದವರೆಗೆ ಶ್ರೀ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ಗುರುವಾರದಂದು ಶ್ರೀ.ಸ್ವಾಮಿಯ ಪ್ರತಿಷ್ಠೆ, ಪ್ರಾಣ ಪ್ರತಿಷ್ಠೆ ಮೊದಲ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಅಂದು ಮಹಾಪೂಜೆಯಾದ ಬಳಿಕ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ.

300x250 AD
Share This
300x250 AD
300x250 AD
300x250 AD
Back to top