Slide
Slide
Slide
previous arrow
next arrow

ಫೆ.17ಕ್ಕೆ ಲೋಕಾಯುಕ್ತ ಅಧಿಕಾರಿಗಳಿಂದ ದೂರು ಅರ್ಜಿ ಸ್ವೀಕಾರ

300x250 AD

ಕಾರವಾರ: ಲೋಕಾಯುಕ್ತ ಅಧಿಕಾರಿಗಳು ಫೆ. 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆವರೆಗೆ ಹಳಿಯಾಳ ತಾಲೂಕಿನ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಮಾಡಿ ವಿಚಾರಣೆ ನಡೆಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಮತ್ತು ಅರ್ಜಿಗಳ ವಿಲೇವಾರಿಗೆ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯ ಲೋಪ, ಕಳಪೆ ಕಾಮಗಾರಿ ಮಾಡುವ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಕರು ದೂರುಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 08382-295293/ 220198 / 222250/ 222022/ 229988 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕಾರವಾರ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top