Slide
Slide
Slide
previous arrow
next arrow

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ: ಉಪವಾಸ ಸತ್ಯಾಗ್ರಹ

300x250 AD

ಜೊಯಿಡಾ: ಕರ್ನಾಟಕ ರಾಜ್ಯದ ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಜಿಲ್ಲಾ ಕುಣಬಿ ಸಮಾಜದಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ದುರ್ಗಾದೇವಿ ಮೈದಾನದಲ್ಲಿ ನಡೆಯಿತು. ತಹಶಿಲ್ದಾರ ಮೂಲಕ ಪ್ರಧಾನಮಂತ್ರಿಯವರಿಗೆ ಮನವಿ ನೀಡಲಾಗಿದೆ. ಪರಿಶಿಷ್ಟ ಪಂಗಡದ ಸ್ಥಾನ ಮಾನ ನೀಡದಿದ್ದರೆ ಉಗ್ರ ಪ್ರತಿಭಟನೆ ಮತ್ತು ಚುನಾವಣೆ ಬಹಿಷ್ಕಾರ ಅನಿವಾರ್ಯ ಎಚ್ಚರಿಕೆ ನೀಡಲಾಗಿದೆ.

 ಜಿಲ್ಲಾ ಕುಣಬಿ ಸಮಾಜ ಅಧ್ಯಕ್ಷ ಸುಭಾಷ್ ಗಾವಡಾ ಮಾತನಾಡಿ ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದೇ ಕಳೆದ 30 ವರ್ಷಗಳಿಂದ ಅನ್ಯಾಯ ಮಾಡಲಾಗಿದೆ. ಬೃಹತ್ ಪಾದಯಾತ್ರೆ ಉಪವಾಸ ಸತ್ಯಾಗ್ರಹ ಮಾಡಿದರು ಉಪಯೋಗಕ್ಕೆ ಬಂದಿಲ್ಲ. ನಿಯೋಗಗಳು ಮನವಿ ನೀಡಿದರು ಕಾಟಾಚಾರಕ್ಕೆ ಸೀಮಿತ ಆಗಿದೆ.ಮುಂದಿನ ದಿನಗಳಲ್ಲಿ ಹೋರಾಟ ನಿಲ್ಲುವುದಿಲ್ಲ. ಲೋಕಸಭೆ ಚುನಾವಣೆ ಬಹಿಷ್ಕಾರ ನಿರ್ಣಯ ಅನಿವಾರ್ಯ ಆಗಲಿದೆ ಎಂದರು.

 ತಾಲೂಕಾ ಅಧ್ಯಕ್ಷ ಅಜಿತ್ ಮಿರಾಶಿ ಮಾತನಾಡಿ ನ್ಯಾಯಕ್ಕಾಗಿ ಹೋರಾಟ ನಿರಂತರ ಮುಂದುವರಿಯುತ್ತದೆ. ಯಾವುದೇ ಸರಕಾರ ನಮ್ಮ ಹೋರಾಟ ಹಗುರವೆಂದು ಪರಿಗಣಿಸಬಾರದು ಎಂದರು.

 ಗೋವಾದಂತೆ ಸ್ಥಾನ ಸಿಗಲಿ:
 ಗೋವಾ ಮತ್ತು ರಾಜ್ಯ ಗಡಿರೇಖೆ ಇರುವುದರಿಂದ ಇಲ್ಲಿನ ಕುಣಬಿ ಗಳಿಗೆ ಎಸ್.ಟಿ ಸೌಲಭ್ಯ ವಂಚಿತವಾಗಿದೆ. ಇವರನ್ನು ಗೋವಾ ರಾಜ್ಯದಂತೆ ಸ್ಥಾನ ಮಾನ ಸಿಗಬೇಕಾಗಿದೆ ಅರುಣ್ ಕಾಮರೆಕರ ಗ್ರಾಮ ಪಂಚಾಯತ್ ಸದಸ್ಯ ಹೇಳಿದರು.

 ಚುನಾವಣೆಗೆ ಸೀಮಿತ:
ರಾಜಕೀಯ ಪಕ್ಷಗಳಿಗೆ ಚುನಾವಣೆ ಬಂದಾಗ ಮಾತ್ರ ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನೆನಪಾಗುತ್ತದೆ. ನಾವುಗಳು ಚುನಾವಣೆಗೆ ಮಾತ್ರ ಸೀಮಿತವಾಗಿದೆ ಎಂದು ಕುಣಬಿ ಅಧ್ಯಕ್ಷ ನಾರಾಯಣ ಯಲ್ಲಾಪುರ ಹೇಳಿದರು.

300x250 AD

 ಸಂಸದರು ಗಮನ ಹರಿಸಲಿ:
ಕುಣಬಿಗಳು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ ಸಂಸ ಅನಂತಕುಮಾರ್ ಹೆಗಡೆ ಲೋಕಸಭೆ ಯಲ್ಲಿ ಧ್ವನಿ ಎತ್ತಬೇಕು. ಈಗ ಹೋರಾಟ ಅನಿವಾರ್ಯ ಆಗಿದೆ ಎಂದು ಸುಭಾಷ್ ಗಾವಡಾ ಹೇಳಿದರು.

 ಹಲವರಿಂದ ಬೆಂಬಲ: ಮರಾಠಾ ಸಮಾಜದ ಅಧ್ಯಕ್ಷ ಚಂದ್ರಕಾಂತ ದೇಸಾಯಿ, ದೇವಿದಾಸ ದೇಸಾಯಿ, ಅರುಣ್ ಕಾಮರೆಕರ, ಸುಭಾಷ್ ಮಾಂಜ್ರೇಕರ, ಸಂತೋಷ ಸಾವಂತ್, ಮಾತನಾಡಿದರು. ಮನವಿ ಸ್ವೀಕರಿಸಿದ ತಹಶಿಲ್ದಾರ ಮಂಜುನಾಥ ಮುನ್ನಳ್ಳಿ ಸರ್ಕಾರದ ರಾಜ್ಯಪಾಲರ ಗಮನ ಹರಿಸಲು ಜಿಲ್ಲಾಧಿಕಾರಿ ಮೂಲಕ ಮನವಿ ಕಳುಹಿಸುತ್ತೇವೆ ಎಂದರು.

 ಇದಕ್ಕೂ ಮೊದಲು ಕುಣಬಿ ಭವನದಲ್ಲಿ ಸಭೆ ನಡೆಯಿತು. ವಿವಿಧ ಘೋಷಣೆಗಳನ್ನು ಕೂಗುತ್ತ ತಾಲೂಕಾ ಕ್ರಿಡಾಂಗಣದಲ್ಲಿ ಉಪವಾಸ ಸತ್ಯಾಗ್ರಹ ಮುಂದುವರೆದಿತ್ತು. ಈ ಸಂದರ್ಭದಲ್ಲಿ ಕುಣಬಿ ಪ್ರಮುಖರಾದ ಲಕ್ಷ್ಮಣ ಗಾಂವಕರ ರಾಜ್ಯ ಕಾರ್ಯದರ್ಶಿ, ಚಂದ್ರಿಮಾ ಮಿರಾಶಿ ಅ.ಗ್ರಾ.ಪಂ, ಮಾಬಳು ಕುಕಡಲಕರ, ನಾರಾಯಣ ಕುಣಬಿ ಅಧ್ಯಕ್ಷ ಯಲ್ಲಾಪುರ, ಚಂದ್ರಶೇಖರ ಸಾವರ್ಕರ್, ರವಿ ಮಿರಾಶಿ ಅಧ್ಯಕ್ಷ ಬೆಳಗಾವಿ ಜಿಲ್ಲೆ, ಬುಧೊ ಕಾಲೇಕರ, ಪ್ರೇಮಾನಂದ ವೆಳಿಪ, ಸೋಮಣ್ಣ ಹನ್ನೋಲಕರ, ಸುಭಾಷ್ ವೆಳಿಪ್, ಪ್ರಸನ್ನ ಗಾವಡಾ, ಶುಭಾಂಗಿ ಗಾವಡಾ, ಸುಷ್ಮಾ ಮಿರಾಶಿ, ಪ್ರಕಾಶ್ ವೆಳಿಪ್,  ನಾರಾಯಣ ಕುಣಬಿ, ಪುಟ್ಟಾ ಕುಣಬಿ, ಮಾಬಳೇಶ್ವರ ಕುಣಬಿ, ವಿಷ್ಣು ಭಿರಂಗತ್, ಮುಂತಾದವರು ಇದ್ದರು.‌ಪಿ.ಎಸ್.ಐ ಮಾಳಿ ಪೋಲಿಸ್ ಬಂದೋಬಸ್ತ್ ಕಲ್ಪಿಸಿದರು.

Share This
300x250 AD
300x250 AD
300x250 AD
Back to top