Slide
Slide
Slide
previous arrow
next arrow

ಜಿಲ್ಲಾಡಳಿತದಿಂದ ಶ್ರದ್ಧಾಭಕ್ತಿಯ ಮಹಾ ಶಿವರಾತ್ರಿ ಆಚರಣೆ

300x250 AD

ಕಾರವಾರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಉತ್ತರ ಕನ್ನಡವತಿಯಿಂದ ಮಾರ್ಚ್ 8 ರಂದು ನಡೆಯುವ ಮಹಾಶಿವರಾತ್ರಿ ಆಚರಣೆಯನ್ನು ಮುರುಡೇಶ್ವರದಲ್ಲಿ ಅತ್ಯಂತ ಶ್ರದ್ಧಾ ಮತ್ತು ಭಕ್ತಿ ಭಾವದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಮಾರ್ಚ್ 8 ರಂದು ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 5 ಗಂಟೆಯವರೆಗೆ ಮಹಾಶಿವರಾತ್ರಿ ಜಾಗರಣೆ ಪ್ರಯುಕ್ತ ಮುರುಡೇಶ್ವರದ ಕಡಲ ಕಿನಾರೆ ಬಳಿ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಕಲಾವಿದರಿಂದ ಶಿವನಿಗೆ ಸಂಬಂಧಿಸಿದ ವಿವಿಧ ಭಕ್ತಿ ಪೂರ್ವಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ಭರತನಾಟ್ಯ, ಕಥಕ್ಕಳಿ, ಒಡಿಸ್ಸಿ ನೃತ್ಯಗಾರರು ಆಗಮಿಸಲಿದ್ದು, ಶಿವತಾಂಡವ, ಶಿವ ಪುರಾಣ, ಶಿವಲೀಲೆ ನೃತ್ಯ ಕಾರ್ಯಕ್ರಮಗಳು ಹಾಗೂ ಶಿವನಿಗೆ ಸಂಬಂಧಿಸಿದ ಭಕ್ತಿ ಗೀತೆಗಳು ಹಾಗೂ ವಾದ್ಯ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಮಾರ್ಚ್ 8 ರಂದು ನಡೆಯುವ ಈ ಅಭೂತಪೂರ್ವ ಭಕ್ತಿ ಪೂರ್ವಕವಾದ ಕಾರ್ಯಕ್ರಮಗಳಿಗೆ ಜಿಲ್ಲೆಯ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಮಹಾಶಿವರಾತ್ರಿಯ ಜಾಗರಣೆಯ ಅರ್ಥಪೂರ್ಣವಾದ ಈ ಭಕ್ತಿ ಭಾವದಲ್ಲಿ ಪರಶಿವನ ಧ್ಯಾನದಲ್ಲಿ ತಲ್ಲಿನರಾಗುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಇಚ್ಚಿಸುವ ಕಲಾವಿದರು ಮತ್ತು ಕಲಾತಂಡಗಳು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಯಂತ್ ಅವರನ್ನು ಮೊ.ಸಂ.Tel:+918553629978 ರಲ್ಲಿ ಸಂಪರ್ಕಿಸುವಂತೆ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top