Slide
Slide
Slide
previous arrow
next arrow

ಅಕ್ರಮ ಅಡಿಕೆ ಆಮದಿಗೆ ಕಟ್ಟುನಿಟ್ಟಿನ ನಿರ್ಬಂಧ; ಕೇಂದ್ರದ ಸ್ಪಷ್ಟ ಸೂಚನೆ

300x250 AD

ಶಿರಸಿ: ಭಾರತಕ್ಕೆ ಅಕ್ರಮವಾಗಿ ಅಡಕೆ ಆಮದಾಗುತ್ತಿರುವುದರಿಂದ ಅಡಕೆಯ ಬೆಲೆಯಲ್ಲಿನ ತೀವ್ರ ಕುಸಿತ ಮತ್ತು ಇದರಿಂದಾಗಿ ಬೆಳಗಾರರ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುವುದಿಲ್ಲ. ತಕ್ಷಣದಿಂದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಅಕ್ರಮ ಆಮದಿನ ನಿರ್ಬಂಧಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವರಾದ ನಿತ್ಯಾನಂದ ರೈ ಸೋಮವಾರ ಸ್ಪಷ್ಟ ಭರವಸೆ ನೀಡಿದರು.

ಅಡಕೆಯ ಅಕ್ರಮ ಆಮದು ಕಾರಣದಿಂದ ಆಗಿರುವ ಅನಾಹುತಗಳನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಅಡಕೆ ಸಹಕಾರ ಸಂಘಗಳ ಮಹಾಮಂಡಲದ ನೇತೃತ್ವದ ನಿಯೋಗಕ್ಕೆ ಧೈರ್ಯ ತುಂಬುವ ಮಾತನಾಡಿದ ಅವರು, ದೇಶದ ಗಡಿಗಳಲ್ಲಿರುವ ಅಧಿಕಾರಿಗಳಿಗೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಕ್ಕೆ ಸೂಚಿಸುತ್ತೇನೆ ಎಂದರು.
ನಿಯೋಗದ ನೇತೃತ್ವ ವಹಿಸಿದ್ದ ಕ್ರ‍್ಯಾಮ್ ಅಧ್ಯಕ್ಷ ಎಚ್.ಎಸ್. ಮಂಜಪ್ಪ ಹೊಸಬಾಳೆ ಇವರು ಅಡಿಕೆ ಬೆಳೆಗಾರರ ಸಂಕಷ್ಟಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿ, ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶೇ.80ರಷ್ಟು ಸಾಂಪ್ರದಾಯಿಕ ಅಡಕೆ ಬೆಳೆಗಾರರಿದ್ದು ಹಿಡುವಳಿಯೂ ಅತ್ಯಂತ ಕಡಿಮೆ ಇದೆ. ಇಂತಹ ಬೆಳೆಗಾರರ ಬದುಕಿನಲ್ಲಿ ಅಡಿಕೆ ಬೆಲೆ ಕುಸಿತವು ನೇರ ದುಷ್ಪರಿಣಾಮ ಬೀರುತ್ತದೆ. ಅಕ್ರಮ ಆಮದಿನಿಂದ ಸರ್ಕಾರಕ್ಕೆ ಕೂಡ ದೊಡ್ಡ ಪ್ರಮಾಣದ ತೆರಿಗೆಯ ನಷ್ಟವಾಗುತ್ತದೆ. ಅದರ ಜೊತೆಗೆ ಅಡಕೆ ಬೆಲೆ ಕುಸಿತವು ವ್ಯಾಪಾರಿ ವಲಯ ಹಾಗೂ ಉತ್ಪಾದನಾ ವಲಯಕ್ಕೂ ಪ್ರಭಾವ ಬೀರುವುದರಿಂದ ತೆರಿಗೆ ಸಂಗ್ರಹದಲ್ಲಿ ಕುಸಿತ ಉಂಟಾಗುತ್ತದೆ. ಹಾಗಾಗಿ ಕಾನೂನುಬದ್ಧ ಕ್ರಮಗಳ ಮೂಲಕವೇ ಈ ರೀತಿ ಅಡಕೆ ಮಾರುಕಟ್ಟೆಗೆ ಬರುವುದನ್ನು ತಡೆಯಬೇಕು ಎಂದು ವಿನಂತಿಸಿದರು.
ನಿಯೋಗದಲ್ಲಿ ಅಡಕೆ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷ ಶಿವಮೊಗ್ಗ ಸುಬ್ರಹ್ಮಣ್ಯ ಯಡಗೆರೆ, ಸಾಗರದ ಆಪ್ಸ್ಕೋಸ್ ಸಂಸ್ಥೆ ಅಧ್ಯಕ್ಷ ಬಿ.ಎ. ಇಂಧೂದರಗೌಡ, ಮ್ಯಾಮ್‌ಕೋಸ್‌ನ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಬರುವೆ, ಶಿರಸಿ ಟಿಎಸ್‌ಎಸ್‌ನ ಪ್ರಧಾನ ವ್ಯವಸ್ಥಾಪಕ (ಪ್ರಭಾರಿ) ವಿಜಯಾನಂದ ಭಟ್ ಇದ್ದರು.

300x250 AD
Share This
300x250 AD
300x250 AD
300x250 AD
Back to top