Slide
Slide
Slide
previous arrow
next arrow

ಲೋಕಾಯುಕ್ತರ ಅಧಿಕಾರಿಗಳ ತಾಲೂಕು ಭೇಟಿ ಕಾರ್ಯಕ್ರಮ

300x250 AD

ಕಾರವಾರ: ಕರ್ನಾಟಕ ಲೋಕಾಯುಕ್ತ ಕಾರವಾರ , ಉತ್ತರ ಕನ್ನಡ ಜಿಲ್ಲಾ ಕಚೇರಿಯ ಅಧಿಕಾರಿಗಳು ಮಾರ್ಚ್ 13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ರ ವರೆಗೆ ಭಟ್ಕಳ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಮಾಡಲಿದ್ದಾರೆ.

ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಮತ್ತು ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯ ಲೋಪ, ಕಳಪೆ ಕಾಮಗಾರಿ ಮಾಡುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ನಮೂನೆ-1 & 2 ರಲ್ಲಿ ಭರ್ತಿಮಾಡಿ ನೀಡಬಹುದಾಗಿದೆ. ಸರ್ಕಾರಿ ಅಧಿಕಾರಿ/ನೌಕರರು ಲಂಚಕ್ಕೆ ಬೇಡಿಕೆ, ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಗುಪ್ತ ಮಾಹಿತಿಯನ್ನು ನೀಡಬಹುದಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:08382- 295293/220198/ 222250/222022/229988 ನ್ನು ಸಂಪರ್ಕಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top