Slide
Slide
Slide
previous arrow
next arrow

ದಲಿತ ಮಹಿಳೆಗೆ ಮನೆ ನಿರ್ಮಿಸಿ ಕೊಡುವಂತೆ ಮನವಿ

300x250 AD

ದಾಂಡೇಲಿ : ನಗರದ ಹಳೆ ದಾಂಡೇಲಿಯ ನಿವಾಸಿಯಾಗಿರುವ
ದಲಿತ ಮಹಿಳೆ ಲಕ್ಷ್ಮೀ ಮಹಾದೇವ ಹರಿಜನ ಇವರ ಮನೆಯನ್ನು ಕೆಡವಲಾಗಿದ್ದು, ಅವರ ಮನೆಯಲ್ಲಿದ್ದ ವಸ್ತುಗಳನ್ನು ಹಾಳು ಮಾಡಲಾಗಿದೆ. ವಿಧವೆ ಮಹಿಳೆಯಾಗಿರುವ ಲಕ್ಷ್ಮೀ ಮಹಾದೇವ ಹರಿಜನ ಅವರಿಗೆ ಮನೆ ನಿರ್ಮಿಸಿ ಕೊಡಬೇಕು ಮತ್ತು ಸೂಕ್ತ ಪರಿಹಾರವನ್ನು ನೀಡಬೇಕು ಹಾಗೂ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮವನ್ನು ಕೈಗೊಂಡು ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಆದಿಜಾಂಬವಂತ ಸಂಘದ ಅಧ್ಯಕ್ಷರಾದ ಚಂದ್ರಕಾಂತ ನಡಿಗೇರ ನೇತೃತ್ವದಲ್ಲಿ ನಗರಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

ಇದೇ ಸಂದರ್ಭದಲ್ಲಿ ಪೌರಾಯುಕ್ತರಿಗೂ ಮನವಿಯನ್ನು ಸಲ್ಲಿಸಲಾಯಿತು. ಪೌರಾಯುಕ್ತರಾದ ಆರ್‌.ಎಸ್‌. ಪವಾರ್,ಲಕ್ಷ್ಮೀ ಮಹಾದೇವ ಹರಿಜನ ಅವರಿಗೆ ಮನೆ ನಿರ್ಮಿಸಿ ಕೊಡುವ ಜವಾಬ್ದಾರಿ ನನ್ನದು ಎಂದು ಭರವಸೆಯನ್ನು ನೀಡಿದರು.

300x250 AD

ಈ ಸಂದರ್ಭದಲ್ಲಿ ಲಕ್ಷ್ಮೀ ಮಹಾದೇವ ಹರಿಜನ‌‌ ಹಾಗೂ ಸಂಘಟನೆಯ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top