ಶಿರಸಿ: ತಾಲೂಕಿನ ಸದಾಶಿವಳ್ಳಿಯಲ್ಲಿ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವವು ಮಾ.13ರಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಅಮೃತ ಹಸ್ತದಿಂದ ನೆರವೇರಿತು. ಶ್ರೀ ದೇವರ ಕಲಾಸಂಕೋಚ, ಕಲಶ ಸ್ಥಾಪನೆ, ಶಿಖರ ಪ್ರತಿಷ್ಠೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಈ ಪ್ರಯುಕ್ತ ಅನಂತ ಪದ್ಮನಾಭ ಯಕ್ಷಗಾನ ಮಂಡಳಿ ಪೆರ್ಡೂರ ಇವರಿಂದ ದಕ್ಷಯಜ್ಞ ಯಕ್ಷಗಾನ ನಡೆಯಿತು.
ಸದಾಶಿವಳ್ಳಿಯಲ್ಲಿ ಅಷ್ಟಬಂಧ ಕಾರ್ಯಕ್ರಮ ಸಂಪನ್ನ
