Slide
Slide
Slide
previous arrow
next arrow

ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ

300x250 AD

ಭಟ್ಕಳ: ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಹೋದ ಘಟನೆ ತಾಲೂಕಿನ ಬದ್ರಿಯಾ ಕಾಲೋನಿಯಲ್ಲಿ ನಡೆದಿದೆ.

ಮನೆಗೆ ಬೆಂಕಿ ತಗುಲಿದ ಬಗ್ಗೆ ಮಾಹಿತಿ ತಿಳಿದ ಮುಸ್ತಾಕ್ ಅಹ್ಮದ್ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಗೆ ಮನೆಯಲ್ಲಿದ್ದ ವಸ್ತುಗಳು ಸುಟ್ಟುಹೋಗಿದ್ದು 50 ಸಾವಿರಕ್ಕೂ ಅಧಿಕ ಹಾನಿಯಾಗಿರುವ ಬಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

300x250 AD

ಕಾರ್ಯಾಚರಣೆಯಲ್ಲಿ ಕುಮಾರ ನಾಯ್ಕ, ನಾರಾಯಣ ಪಟಗಾರ, ಪುರುಸೊತ್ತಮ ನಾಯ್ಕ, ಅಕ್ಷಯ ಹಿರೇಮಠ ಭಾಗವಹಿಸಿದ್ದರು

Share This
300x250 AD
300x250 AD
300x250 AD
Back to top