Slide
Slide
Slide
previous arrow
next arrow

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಂಸದರಿಂದ ಕೇಂದ್ರಕ್ಕೆ  ಮನವಿ

300x250 AD

ಜೋಯಿಡಾ : ಉತ್ತರ ಕನ್ನಡ ಜಿಲ್ಲೆಯ ಕುಣಬಿ ಜನರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕೇಂದ್ರ ಬುಡಕಟ್ಟು ಸಚಿವರಾದ ಅರ್ಜುನ ಮುಂಡಾ ಅವರಿಗೆ ಸಂಸದ ಅನಂತ ಕುಮಾರ್ ಹೆಗಡೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ಜೋಯಿಡಾ ತಾಲೂಕು ಕುಣಬಿ ಸಮಾಜದ ಅಧ್ಯಕ್ಷರಾದ ಅಜಿತ್‌ ಮಿರಾಶಿಯವರು ಮಂಗಳವಾರ  ಜೋಯಿಡಾದಲ್ಲಿ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವರು ನೀಡಿದ ಪ್ರಕಟಣೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರದಿಂದ ಕುಣಬಿಗಳ ಬಗ್ಗೆ ಅಧ್ಯಯನ ಮಾಡಿ ಕೇಂದ್ರ ಸರ್ಕಾರದ ಆರ್.ಜಿ.ಐಗೆ ರಾಜ್ಯ ಸರ್ಕಾರದಿಂದ ವರದಿ ಕಳಿಸಲಾಗಿದ್ದು, ಕುಣಬಿ ಜನರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಎಲ್ಲಾ ಗುಣಲಕ್ಷಣ ಹೊಂದಿದ್ದು, ರಾಜ್ಯ ಸರ್ಕಾರದಿಂದ ನೀಡಿದ ವರದಿಯನ್ನು  ಪರಿಗಣಿಸಿ ಕುಣಬಿ ಜನರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ಅಜಿತ್ ಮಿರಾಶಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top