Slide
Slide
Slide
previous arrow
next arrow

ರಾಮೇಶ್ವರಂ ಕೆಫೆ ಪ್ರಕರಣ: ಭಟ್ಕಳಕ್ಕೆ ಎನ್ಐಎ ತಂಡ ಭೇಟಿ

300x250 AD

ಭಟ್ಕಳ: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ ತಂಡ) ಭಟ್ಕಳಕ್ಕೆ ಭೇಟಿ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಮೂರು ಜನ ಅಧಿಕಾರಿಗಳು ಇರುವ ತಂಡವು ತಲೆಮರೆಸಿಕೊಂಡಿರುವ ಶಂಕಿತ ಉಗ್ರ,  ಇಕ್ಬಾಲ್ ಭಟ್ಕಳ್ ಮನೆಗೆ ಭೇಟಿ ನೀಡಿದೆ. ಭಟ್ಕಳದ ತಕಿಯಾ ಸ್ಟ್ರೀಟ್ ನಲ್ಲಿರುವ  ಇಕ್ಬಾಲ್ ಭಟ್ಕಳ ಮನೆಗೆ ಭೇಟಿ ನೀಡಿದ್ದು, ಇಕ್ಬಾಲ್ ಭಟ್ಕಳ್ ಮಗನನ್ನು ವಿಚಾರಿಸಿದ ಎನ್ಐಎ ಅಧಿಕಾರಿಗಳು ವಿಚಾರಣೆ ಸಂಬಂಧ ಬೆಂಗಳೂರಿಗೆ ಬರುವಂತೆ ನೋಟಿಸ್ ನೀಡಿ ತೆರಳಿದೆ.

300x250 AD

ಬಾಂಬ್ ಸ್ಫೋಟ ನಂತರ ಬೆಂಗಳೂರಿನ ಸುಜಾತ ಸರ್ಕಲ್‌ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ ಇಳಿದಿದ್ದ. ನಂತರ ತುಮಕೂರಿನಿಂದ ಬಳ್ಳಾರಿಗೆ ಬಸ್‌ನಲ್ಲಿ ಬಂದು ತದ ನಂತರ ಮಂತ್ರಾಲಯ- ಗೋಕರ್ಣ ಬಸ್‌ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎನ್ಐಎ ತಂಡ ಭಟ್ಕಳಕ್ಕೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ.

Share This
300x250 AD
300x250 AD
300x250 AD
Back to top