Slide
Slide
Slide
previous arrow
next arrow

ಶಿರಸಿಯಲ್ಲಿ ಭಾಜಪ ಸ್ಥಾಪನಾ ದಿನಾಚರಣೆ

300x250 AD

ಶಿರಸಿ: ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನದ ಅಂಗವಾಗಿ ಶಿರಸಿ ನಗರ ಮಂಡಲದಿಂದ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಕಾರ್ಯಾಲಯ ಪಂ.ದೀನದಯಾಳ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .

ಬಿಜೆಪಿ ಸಿರಸಿ ನಗರ ಮಂಡಲ ಅಧ್ಯಕ್ಷರಾದ ಆನಂದ್ ಸಾಲೇರ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.ಮಾಜಿ ಶಾಸಕರಾದ ಆದ ವಿವೇಕಾನಂದ ವೈದ್ಯ ಪಕ್ಷದ ಹಿನ್ನೆಲೆ ಮತ್ತು ಪ್ರಾಮುಖ್ಯತೆ ಕಾರ್ಯಕರ್ತರಿಗೆ ತಿಳಿಸಿಕೊಟ್ಟರು.ಓ.ಬಿ.ಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ರಾಜೇಂದ್ರ ನಾಯ್ಕರ ಅವರು ಪಕ್ಷ ಹಾಗೂ ಮೋದಿಜಿಯ ಬಗ್ಗೆ ಅವರ ಕಾರ್ಯಗಳ ಬಗ್ಗೆ ಕಾರ್ಯಕರ್ತರಿಗೆ ತಿಳಿಸಿಕೊಟ್ಟು ಕಾರ್ಯಕರ್ತರಿಗೆ ಉತ್ಸಾಹಿಸಿದರು.

ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಹಾಂತೇಶ್ ಹಾದಿಮನೆ ಕಾರ್ಯಕ್ರಮವನ್ನು ನಿರ್ವಹಿಸಿದರು ಹಾಗೂ ನಾಗರಾಜ್ ನಾಯ್ಕ ಕಾರ್ಯಕ್ರಮಕ್ಕೆ ವಂದನಾರ್ಪಣೆ ಸಲ್ಲಿಸಿದರು.ಸಭೆಯಲ್ಲಿ ಯುವ ಮೋರ್ಚ ಜಿಲ್ಲಾ ಅಧ್ಯಕ್ಷರಾದ ಪ್ರೇಮ್ ಕುಮಾರ್ ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀಮತಿ ಶರ್ಮಿಳಾ ಮಾದನ್ಗಿರಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿಗಳಾದ ರಮಾಕಾಂತ್ ಭಟ್,ಸ್ಥಾಯಿ ಸಮಿತಿ ಅಧ್ಯಕ್ಷರಾದ ಕುಮಾರ್ ಬೋರ್ಕರ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top