Slide
Slide
Slide
previous arrow
next arrow

ವಿವೇಕ್ ಹೆಬ್ಬಾರ್ ಸಮ್ಮುಖದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

300x250 AD

ಮುಂಡಗೋಡ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷ ಸೇರಿದ ಬೆನ್ನಲ್ಲೇ ಸಾವಿರಾರು ಬಿಜೆಪಿ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ತಾಲೂಕಿನ  ಟೌನ್ ಹಾಲ್ ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಮುಂಡಗೋಡ ನಗರ ಹಾಗೂ ಗ್ರಾಮೀಣ ಭಾಗಗಳಿಂದ ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾರವರು ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.

300x250 AD

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವಕರ್,ಮಾಜಿ ಶಾಸಕ ವಿ.ಎಸ್ ಪಾಟೀಲ್,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ, ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಕೃಷ್ಣ ಹಿರೇಹಳ್ಳಿ, ಪ್ರಕಾಶ್ ಹೆಗಡೆ, ಬಸವರಾಜ ನಡುವಿನಮನಿ, ಶಾರದಾ ರಾಠೋಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top