Slide
Slide
Slide
previous arrow
next arrow

ಕರವೇ ತಾಲ್ಲೂಕು ಅಧ್ಯಕ್ಷರಾಗಿ ಅಸೋಕ ಮಾನೆ, ಜಿಲ್ಲಾಧ್ಯಕ್ಷೆಯಾಗಿ ನೀಲಾ ಮಾದರ

300x250 AD

ದಾಂಡೇಲಿ : ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ದಾಂಡೇಲಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಅಶೋಕ್‌ ಮಾನೆ, ಉಪಾಧ್ಯಕ್ಷರನ್ನಾಗಿ ರವಿ ಮಾಳಿ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ನೀಲಾ ಎಸ್.ಮಾದರ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಸಂಸ್ಥಾಪಕ ಅಧ್ಯಕ್ಷರಾದ ನಾರಾಯಣಗೌಡ ಅವರು ನೇಮಕ ಮಾಡಿದ್ದಾರೆ.

ನಗರದ ಕರ್ನಾಟಕ ಸಂಘದ ಪಂಚಗಾನ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಭೆ ನಡೆಸಿ ನೂತನ ಪದಾಧಿಕಾರಿಗಳ ಯಾದಿಯನ್ನು ಪ್ರಕಟಿಸಿದರು. ನಂತರ ಸಂಘಟನೆಯ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕರವೇ ನೂತನ ತಾಲೂಕು ಅಧ್ಯಕ್ಷರಾದ ಅಶೋಕ್ ಮಾನೆ, ಉಪಾಧ್ಯಕ್ಷರಾದ ರವಿ ಮಾಳಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನೀಲಾ.ಎಸ್.ಮಾದರ, ಪ್ರಮುಖರಾದ ಚಂದ್ರು ಮಾಳಿ, ಮೋಹನ ಸನದಿ, ಮುಜೀಬಾ ಛಬ್ಬಿ, ರಾಜಶ್ರೀ ಬೇಂದ್ರೆ ಮೊದಲಾದವರು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top