Slide
Slide
Slide
previous arrow
next arrow

ಟ್ರಾಕ್ಸ್, ಬೈಕ್‌ ನಡುವೆ ಡಿಕ್ಕಿ: ಓರ್ವನ ದುರ್ಮರಣ

300x250 AD

ಅಂಕೋಲಾ : ತಾಲೂಕಿನ ಹಟ್ಟಿಕೇರಿ ಸಮೀಪ ಟ್ರ್ಯಾಕ್ಸ್ ಮತ್ತು ಬೈಕ್ ನಡುವೆ ಭೀಕರ  ಅಪಘಾತದಲ್ಲಿ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಬೈಕಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕಿನಲ್ಲಿದ್ದ ಓರ್ವ ಸಜೀವ ಸುಟ್ಟು ಕರಕಲಾಗಿ,ಮೃತಪಟ್ಟ ಧಾರುಣ ಘಟನೆ ನಡೆದಿದೆ.

ಬೆಳಂಬಾರದಲ್ಲಿ ಜಾತ್ರಾ ಉತ್ಸವ ಮುಗಿಸಿ ಬೈಕ್ ಮೇಲೆ ಹಾರವಾಡದ ಮನೆಗೆ ಮರಳುತ್ತಿದ್ದ ವೇಳೆ ಬೈಕಿಗೆ, ಎದುರುಗಡೆಯಿಂದ ಜೋರಾಗಿ ಬಂದ ತೂಫಾನ್ ವಾಹನವೊಂದು ಡಿಕ್ಕಿ ಪಡಿಸಿದ ಪರಿಣಾಮ, ಬೈಕ್‌ನಲ್ಲಿದ್ದ ಇಬ್ಬರು ಸಿಡಿದು ಬಿದ್ದು ಗಂಭೀರ ಗಾಯಗೊಂಡರೆ, ಇನ್ನೋರ್ವ ಬೈಕಿಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಕರಕಲಾಗಿ ಸ್ಥಳದಲ್ಲಿಯೇ ಮೃತಪಟ್ಟ ಎನ್ನಲಾಗಿದೆ.

ರಸ್ತೆ ಅಪಘಾತ ಸಂಭವಿಸುತ್ತಿದ್ದಂತೆ ತೂಫಾನ್ ವಾಹನದಲ್ಲಿದ್ದವರು ವಾಹನ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಸುಮಂತ್ ಯಾದವ್ ಹರಿಕಂತ್ರ ಮೃತ ದುರ್ದೈವಿಯಾಗಿದ್ದು, ಗಂಭೀರ ಗಾಯಗೊಂಡ ಸುಮಿತ್ ಹರಿಕಂತ್ರ ಹಾಗು ಚಾಣಕ್ಯ ಹರಿಕಂತ್ರ ಅವರನ್ನು ಚಿಕಿತ್ಸೆಗಾಗಿ ತಾಲೂಕಾ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

300x250 AD

ಅಂಕೋಲಾ ಪೊಲೀಸ್ ಠಾಣೆಯ ಸಿಪಿಐ ಶ್ರೀಕಾಂತ ತೋಟಗಿ, ಸಂಚಾರಿ ವಿಭಾಗದ ಪಿಎಸ್ಐ ಸುನೀಲ ಹುಲ್ಲೊಳ್ಳಿ, ಪಿಎಸ್ಐ ಉದ್ದಪ್ಪ ಮತ್ತು ಸಿಬ್ಬಂದಿಗಳು ಹಾಗೂ 112 ತುರ್ತು ವಾಹನ ಸಿಬ್ಬಂದಿಗಳು ಸ್ಥಳ ಪರಿಶೀಲಿಸಿ ಕಾನೂನು ಕ್ರಮ ಮುಂದುವರಿಸಿದ್ದಾರೆ.

Share This
300x250 AD
300x250 AD
300x250 AD
Back to top