Slide
Slide
Slide
previous arrow
next arrow

ಹೃದಯಾಘಾತದಿಂದ ಪ್ರವಾಸಿಗ ನಿಧನ

300x250 AD

ದಾಂಡೇಲಿ : ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದ ಪ್ರವಾಸಿಗನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದಿನ ನಿವಾಸಿ 40 ವರ್ಷ ವಯಸ್ಸಿನ ಪವನ್ ಕುಮಾರ್ ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಏಳೆಂಟು ಜನರ ತಂಡದ ಜೊತೆ ಪ್ರವಾಸಕ್ಕೆಂದು ದಾಂಡೇಲಿಗೆ ಆಗಮಿಸಿದ್ದನು. ಈ ತಂಡ ನಗರದ ಸಮೀಪದಲ್ಲಿರುವ ಹೋಂಸ್ಟೇ ಒಂದರಲ್ಲಿ ತಂಗಿತ್ತು. ಶನಿವಾರ ರಾತ್ರಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಆತನನ್ನು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಆದರೆ ಆತ ಹೃದಯಘಾತದಿಂದ ಸಾವನ್ನಪ್ಪಿರುತ್ತಾನೆ. ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣ ಅರಕೇರಿಯವರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top