Slide
Slide
Slide
previous arrow
next arrow

ಲಾರಿ-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರನ ದುರ್ಮರಣ

300x250 AD

ಅಂಕೋಲಾ : ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಲಾರಿ ಕ್ಲೀನರ್ ಗೂ ಚಿಕ್ಕ ಪುಟ್ಟ ಗಾಯಗಳಾದ ಘಟನೆ ರಾ.ಹೆ 63 ಹೊನ್ನಳ್ಳಿ ಬಳಿ ಸಂಭವಿಸಿದೆ. ಹೆಗ್ಗಾರ – ಮಕ್ಕಿಗದ್ದೆ ನಿವಾಸಿ ಕೀರಾ ಕೃಷ್ಣ ಹರಿಕಂತ್ರ (60 ) ಮೃತ ದುರ್ದೈವಿ. ಕುಮಟಾ ತಾಲೂಕಿನ ಬರ್ಗಿಯಲ್ಲಿ ನಡೆದ ಹಬ್ಬದಲ್ಲಿ ದೇವರ ದರ್ಶನ ಪಡೆದು, ಹಣ್ಣು ಕಾಯಿ ಹರಕೆ ಸೇವೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಸಾಗುತ್ತಿದ್ದ ಸರಕು ಸಾಗಿಸುವ ಭಾರೀ ವಾಹನ (ಲಾರಿ) ದಾರಿಮಧ್ಯೆ ಅಂಕೋಲಾ ತಾಲೂಕ ವ್ಯಾಪ್ತಿಯ ಹೊನ್ನಳ್ಳಿ ಬಳಿ ಡಾಬಾ ಒಂದರ ಎದುರುಗಡೆ ವೇಗವಾಗಿ ನುಗ್ಗಿ ಬೈಕ್ ಗೆ ಜೋರಾಗಿ ಡಿಕ್ಕಿ ಪಡಿಸಿದ ಪರಿಣಾಮ ಬೈಕ್ ಸವಾರ ಸಿಡಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ತನ್ನ ವಾಹನ ಚಲಾಯಿಸಿದ ಲಾರಿ ಚಾಲಕ ವಾಹನದ ಮೇಲಿನ ತನ್ನ ನಿಯಂತ್ರಣ ಕಳೆದುಕೊಂಡ ಪರಿಣಾಮ, ಲಾರಿ ರಸ್ತೆಯ ಸಂಪೂರ್ಣ ಬಲ ದಿಕ್ಕಿಗೆ ಹೋಗಿದೆ.
ಅಂಕೋಲಾ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್ಐ ಉದ್ದಪ್ಪ ಧರಪ್ಪನವರ, ಸಂಚಾರಿ ವಿಭಾಗದ ಪಿಎಸ್ಐ ಸುನೀಲ ಹುಲ್ಲೊಳ್ಳಿ, ಎಎಸ್ಐ ತಿಮ್ಮಪ್ಪ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲಿಸಿ ಕಾನೂನು ಕ್ರಮ ಮುಂದುವರಿಸಿದ್ದಾರೆ. ಮೃತ ದೇಹವನ್ನು ಘಟನಾ ಸ್ಥಳದಿಂದ ಮರಣೋತ್ತರ ಪರೀಕ್ಷೆಗಾಗಿ ತಾಲೂಕಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟರೆ, ಲಾರಿ ಕ್ಲೀನರ್ ಗೂ ಸಹ ಚಿಕ್ಕ ಪುಟ್ಟ ಗಾಯಗಳಾಗಿದೆ. ಅಪಘಾತ ಪಡಿಸಿದ ಲಾರಿ ಚಾಲಕನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತಂತೆ ಹೆಚ್ಚಿನ ಮತ್ತು ನಿಖರ ಮಾಹಿತಿಗಳು ತಿಳಿದು ಬರಬೇಕಿದೆ. ಮೃತ ಕೀರಾ ಹರಿಕಂತ್ರ ತಮ್ಮೂರಿನ ಹಾಗೂ ಸುತ್ತಮುತ್ತಲ ಗ್ರಾಮಸ್ಥರೊಂದಿಗೆ ಪ್ರೀತಿ ವಿಶ್ವಾಸದಿಂದ ಇರುತ್ತಿದ್ದ. ಆತನ ಅಕಾಲಿಕ ಸಾವು ಮೃತನ ಕುಟುಂಬಸ್ಥರು, ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದೆ.

300x250 AD
Share This
300x250 AD
300x250 AD
300x250 AD
Back to top