Slide
Slide
Slide
previous arrow
next arrow

ಅಕ್ರಮ ಜಾನುವಾರು ಸಾಗಾಟ: ಓರ್ವ ವಶಕ್ಕೆ, ಮೂವರು ಪರಾರಿ

300x250 AD

ಕುಮಟಾ : ತಾಲೂಕಿನ ಹೊಲನಗದ್ದೆ ಟೋಲ್ ಗೇಟ್ ಬಳಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಕಂಟೇನರ್ ವಾಹನದ ಮೇಲೆ ದಾಳಿ‌ ನಡೆಸಿ ಜಾನುವಾರುಗಳನ್ನು ರಕ್ಷಿಸಿ, ವಾಹನ‌ ಸಮೇತ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಜೈನುದ್ದೀನ್ ಜಕ್ರಿಯಾ, ಕಾಸರಕೋಡ, ಕೇರಳ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನುಳಿದವರು ಪರಾರಿಯಾಗಿದ್ದಾರೆ. ಕಂಟೇನ‌ರ್ ವಾಹನದಲ್ಲಿ 21ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಲಘಟಗಿಯಿಂದ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಕುರಿತು ಕುಮಟಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top