Slide
Slide
Slide
previous arrow
next arrow

ಗೋಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

300x250 AD

ಶಿರಸಿ: ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ ಜೂ.17, ಗುರುವಾರದಂದು ಇಲ್ಲಿಯ ಎಂಟನೇ ವರ್ಗದ ವಿದ್ಯಾರ್ಥಿಗಳಿಗೆ ಶಾಲೆ ಹಳೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾದ ಹಾಗೂ ಎಸ್‌ಬಿಆಯ್ ಬ್ಯಾಂಕಿನ ವ್ಯವಸ್ಥಾಪಕರಾಗಿ ನಿವೃತ್ತರಾದ ಶಿರಸಿ ತಾಲೂಕಿನ ದಾಯಿಮನೆಯ ಮಂಜುನಾಥ ಭಟ್ಟ ಇವರು ರೂ.20,000/- ರೂ ಮೌಲ್ಯದ ಶಾಲಾ ಬ್ಯಾಗ್‌ಗಳನ್ನು ಉಚಿತವಾಗಿ ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು ಜೀವನದಲ್ಲಿ ದಾನದ ಗುಣವನ್ನು ಬೆಳೆಸಿಕೊಳ್ಳಬೇಕು ಹಾಗೆಯೆ ಜೀವನದಲ್ಲಿ ಒಳ್ಳೆಯ ಚಾರಿತ್ರ್ಯವನ್ನು ಬೆಳೆಸಿಕೊಳ್ಳಬೇಕು.ನಾನು ಈ ಪ್ರೌಢಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕಲಿತಿದ್ದೇನೆ. ನೀವು ಸಹ ಉತ್ತಮ ನಾಗರಿಕರಾಗಿ ದೇಶಪ್ರೇಮ ಬೆಳೆಸಿಕೊಂಡು ಮನುಕುಲದ ಉದ್ಧಾರಕ್ಕೆ ಶ್ರಮಿಸಿ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಾಧ್ಯಾಪಕರಾದ ನಾರಾಯಣ ದೈಮನೆ ಸ್ವಾಗತಿಸಿದರು. ಆರ್.ಕೆ. ಚವ್ಹಾಣ್ ನಿರೂಪಿಸಿ ವಂದಿಸಿದರು.ಶ್ರೀಯುತರ ಕೊಡುಗೆಯನ್ನು ಸಂಸ್ಥೆಯ ಅಧ್ಯಕ್ಷರಾದ ಎಮ್.ಎಲ್. ಹೆಗಡೆ ಹಲಸಿಗೆ ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top