Slide
Slide
Slide
previous arrow
next arrow

ಶ್ರೀರಾಮ ಪೈನಾನ್ಸ್‌ನಲ್ಲಿ ಹಣ ವಂಚನೆ: ಇಬ್ಬರ ಬಂಧನ

300x250 AD

ಭಟ್ಕಳ : ಭಟ್ಕಳ  ಶ್ರೀರಾಮ್ ಪೈನಾನ್ಸ್ ಶಾಖೆಯಲ್ಲಿ ಪ್ರಬಂಧಕರಾಗಿ ಕರ್ತವ್ಯ ನಿರ್ವಹಿಸಿದ್ದ ಮೂವರು ಶಾಖೆಯ ಸುಮಾರು 89 ಲಕ್ಷಕ್ಕೂ ಅಧಿಕ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೇ.29ರಂದು ಪ್ರಕರಣ ದಾಖಲಾಗಿದೆ.

ಆರೋಪಿತರನ್ನು ರಾಘವೇಂದ್ರ ರಾಜೀವ ಸ್ವಾಮಿ ಕುಂದಾಪುರ, ಆನಂದ ಮಾದೇವ ನಾಯ್ಕ ಬೆಳ್ನಿ, ರಾಘವೇಂದ್ರ ನಾಯ್ಕ ಆಸರಕೇರಿ ಎಂದು ತಿಳಿದು ಬಂದಿದೆ. ಅವರು ಶಾಖೆಯಲ್ಲಿ ಕೆಲಸ ಮಾಡುವ ಅವಧಿಯಲ್ಲಿ ಜನವರಿ 1, 2023 ರಿಂದ ಮೇ 2 2024 ವೇಳೆ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪೈನಾನ್ಸಿನಲ್ಲಿ ಸಾಲ ಪಡೆದ ಕೆಲವು ಸಾಲಗಾರರಿಗೆ ಸಂಬಂಧಿಸಿದ ವಾಹನಗಳ ಸಾಲವನ್ನು ಪೂರ್ತಿಯಾಗಿ ಚುಕ್ತಾಗೊಳಿಸಿ ಕಂಪೆನಿಯ ಹೈಪೋಥಿಕೇಶನ್ ಸರ್ಟಿಪಿಕೇಟನ್ನು ತಯಾರಿ ಮಾಡಿ ಕಂಪನಿಯ ಸೀಲ್ ಅನ್ನು ಬಳಸಿ ಅದಕ್ಕೆ ಮುಖ್ಯ ಕಚೇರಿಯಿಂದ ಸಹಿ ಪಡೆಯದೆ ಅವರೇ ಅದಕ್ಕೆ ನಕಲಿ ಸಹಿ ಮಾಡಿ ಆರ್.ಟಿ. ಓ ದಲ್ಲಿ ನೀಡಿ ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಲು ಅನುಕೂಲ ಮಾಡಿಕೊಟ್ಟು ಕಂಪನಿಗೆ ಹಾಗೂ ಗ್ರಾಹಕರಿಗೆ ಮೋಸ ಮಾಡಿದ್ದು, ಮತ್ತು ಆರೋಪಿತರು ಕಂಪನಿಯಲ್ಲಿ ಸಾಲ ಪಡೆದ ಸಾಲ ಮರುಪಾವತಿ ಮಾಡದೇ ಇರುವ ಗ್ರಾಹಕರ ವಾಹನಗಳನ್ನು ಶ್ರೀರಾಮ ಪೈನಾನ್ಸನ ಮೇಲಾಧಿಕಾರಿಗಳ ಅನುಮೋದನೆಯನ್ನು ಪಡೆಯದೇ ತಮ್ಮ ವಶಕ್ಕೆ ಪಡೆದುಕೊಂಡು ವಾಹನವನ್ನು ಕಂಪನಿಯ ನಿಯಮಾವಳಿಗಳನ್ನು ಪಾಲಿಸದೇ ಮಾರಾಟ ಮಾಡಿ ಬಂದ ಹಣವನ್ನು ತಮ್ಮ ಸ್ವಂತ ಖರ್ಚಿಗೆ ಬಳಸಿಕೊಂಡು ಕಂಪನಿಗೆ ಹಾಗೂ ಗ್ರಾಹಕರಿಗೆ ಮೋಸ, ವಂಚನೆ, ನಂಬಿಕೆ ದ್ರೋಹವನ್ನು ಎಸಗಿದ್ದಾರೆ. ಹಾಗೂ ಆರೋಪಿತರು ಕಳೆದ ಕೆಲವು ತಿಂಗಳುಗಳಿಂದ ಈ ಕೆಳಗಿನ ಗ್ರಾಹಕರಿಂದ ಲೋನ್ ಸೆಟ್ಲಮೆಂಟ್ ಮಾಡುತ್ತೇವೆ ಎಂದು ಅವರಿಂದ ಹಣವನ್ನು ಪಡೆದು ಕಂಪನಿಗೆ ಹಣವನ್ನು ಮರು ಪಾವತಿ ಮಾಡದೇ ತಮ್ಮ ಸ್ವಂತ ಖರ್ಚಿಗೆ ದುರ್ಬಳಕೆ ಮಾಡಿಕೊಂಡು ಹಾಗೂ ಗ್ರಾಹಕರಿಂದ ಸಾಲದ ಕಂತುಗಳನ್ನು ಸಾಲದ ಖಾತೆಗೆ ಜಮಾ ಮಾಡುತ್ತೇವೆ ಎಂದು ಸುಳ್ಳು ಹೇಳಿ ಅವರಿಂದ ಹಣವನ್ನು ಪಡೆದು ಗ್ರಾಹಕರ ಸಾಲದ ಖಾತೆಗೆ ಕಟ್ಟದೇ ತಮ್ಮ ಸ್ವಂತ ಖರ್ಚಿಗೆ ದುರ್ಬಳಕೆ ಮಾಡಿಕೊಂಡು ಕಂಪನಿಗೆ ವಂಚಿಸಿ, ನಂಬಿಕೆ ದ್ರೋಹ ಮಾಡಿ ಕರ್ತವ್ಯ ಲೋಪ ಎಸಗಿ ಒಟ್ಟೂ 89,79,524 ರೂ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಶ್ರೀರಾಮ್ ಪೈನಾನ್ಸ್ ಜಿ.ಪಿ. ಹೋಲ್ಡರ್ ನವೀನ ಪೂಜಾರಿ ದೂರು ದಾಖಲಿಸಿದ್ದಾರೆ.

300x250 AD

ಸದ್ಯ ಪ್ರಕರಣ ದಾಖಲಿಸಿಕೊಂಡ ಗ್ರಾಮೀಣ ಸಿ.ಪಿ.ಐ ಚಂದನ ಗೋಪಾಲ್ ಇಬ್ಬರು ಆರೋಪಿಗಳಾದ ಆನಂದ ನಾಯ್ಕ ಹಾಗೂ ರಾಘವೇಂದ್ರ ನಾಯ್ಕರನ್ನು  ಬಂಧಿಸಿದ್ದು ಇನ್ನೋರ್ವ ಆರೋಪಿ ರಾಘವೇಂದ್ರ ರಾಜೀವ್ ಸ್ವಾಮಿಗೆ ಬಲೆ ಬಿಸಿದ್ದಾರೆ.

Share This
300x250 AD
300x250 AD
300x250 AD
Back to top