Slide
Slide
Slide
previous arrow
next arrow

ಹೆದ್ದಾರಿಯಲ್ಲಿ ದರೋಡೆಗೆ ಯತ್ನ: ಓರ್ವನ‌ ಬಂಧನ

300x250 AD

ಯಲ್ಲಾಪುರ: ಹುಬ್ಬಳ್ಳಿ – ಅಂಕೋಲಾ ಹೆದ್ದಾರಿಯಲ್ಲಿ ಸಂಚರಿಸುವ ಕಾರುಗಳನ್ನು ಗುರಿಯಾಗಿರಿಸಿಕೊಂಡು ಸುಲಿಗೆ ಮಾಡುತ್ತಿದ್ದ ದರೋಡೆಕೋರರ ತಂಡದ ಸದಸ್ಯನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ.
ಮೊಬೈಲ್ ನೆಟ್‌ವರ್ಕ್ ಸಹ ಸಿಗದ ಅರಬೈಲ್ ಘಟ್ಟ ಪ್ರದೇಶದಲ್ಲಿ ಆಗಂತುಕರು ದಾಳಿ ಮಾಡುತ್ತಾರೆ. ಕಾರಿನಲ್ಲಿದ್ದವರನ್ನು ಬೆದರಿಸಿ ಅವರ ಬಳಿಯಿದ್ದ ಹಣ-ಒಡವೆಗಳನ್ನು ದೋಚುತ್ತಾರೆ. ಮೇ ೨೫ರಂದು ರಾಜಸ್ಥಾನದ ಸುರೇಶ್ ರಾವ್ ಎಂಬಾತರು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದರು. ಅವರನ್ನು ಹಿಂಬಾಲಿಸಿಕೊoಡು ಬಂದ ನಾಲ್ವರು ಕಾರಿಗೆ ಅಡ್ಡಗಟ್ಟಿ ಒಳಗಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಅವರ ಬಳಿಯಿದ್ದ ಹಣ-ಒಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಸುರೇಶ್ ರಾವ್ ನೀಡಿದ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಮಹಾರಾಷ್ಟ್ರದ ಸತೀಶ ಕೋಳಿ ಎಂಬಾತ ಸಿಕ್ಕಿಬಿದ್ದಿದ್ದಾನೆ. ಉಳಿದವರು ತಪ್ಪಿಸಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top