ಯಲ್ಲಾಪುರ: ತಾಲೂಕಿನ ಚಂದಗುಳಿಯ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಭೇಟಿ ನೀಡಿದರು.
ಈ ವೇಳೆ ಶ್ರೀಗಳು ಘಂಟೆ ಗಣಪತಿಗೆ ವಿಶೇಷ ಪೂಜೆ ಸಲ್ಲಿದರು. ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಶ್ರೀಗಳ ಪಾದಪೂಜೆ ನೆರವೇರಿಸಲಾಯಿತು.
ದೇವಸ್ಥಾನದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು. ದೇವಸ್ಥಾನದ ಮೊಕ್ತೇಸರ ಲಕ್ಷ್ಮೀನಾರಾಯಣ ಭಟ್ಟ ತಾರೀಮಕ್ಕಿ ಕಾಮಗಾರಿಯ ಕುರಿತು ಶ್ರೀಗಳಿಗೆ ವಿವರಿಸಿದರು.
ಚಂದಗುಳಿ ಘಂಟೆ ಗಣಪತಿ ದೇವಸ್ಥಾನಕ್ಕೆ ಎಡನೀರು ಮಠ ಶ್ರೀಗಳ ಭೇಟಿ
![](https://euttarakannada.in/wp-content/uploads/2024/06/IMG-20240615-WA0066-730x438.jpg)