Slide
Slide
Slide
previous arrow
next arrow

ಜೂ.22ಕ್ಕೆ ಕಸಾಪದಿಂದ ಪ್ರತಿಭಾ ಪುರಸ್ಕಾರ

300x250 AD

ಯಲ್ಲಾಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು  ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕ ಇವರ ಆಶ್ರಯದಲ್ಲಿ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಜೂ.22, ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಅಧ್ಯಕ್ಷತೆ ವಹಿಸಲಿದ್ದಾರೆ.
ಕಸಾಪ ತಾಲೂಕಾ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ,ಬಿಇಒ ಎನ್.ಆರ್.ಹೆಗಡೆ, ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ,ಕಸಾಪ ಜಿಲ್ಲಾ ಕಾರ್ಯದರ್ಶಿ ಜಾರ್ಜ್ ಫರ್ನಾಂಡೀಸ್,ಪ್ರೌಢಶಾಲಾ ಸಹಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಅಜಯ ನಾಯಕ,ತಾಲೂಕಾ ಅಧ್ಯಕ್ಷ ಚಂದ್ರಶೇಖರ ಎಸ್.ಸಿ., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ,ತಾಲೂಕಾ ಅಧ್ಯಕ್ಷ ಆರ್.ಆರ್.ಭಟ್ಟ, ನೌಕರ ಸಂಘದ ತಾಲೂಕಾ ಅಧ್ಯಕ್ಷ ಪ್ರಕಾಶ ನಾಯಕ ಭಾಗವಹಿಸಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top