Slide
Slide
Slide
previous arrow
next arrow

ತೈಲ ಬೆಲೆ ಏರಿಕೆ: ಸಿಎಂ ಪ್ರತಿಕೃತಿ ಸುಟ್ಟು ಪ್ರತಿಭಟನೆ

300x250 AD

ಹೊನ್ನಾವರ : ರಾಜ್ಯ ಕಾಂಗ್ರೆಸ್‌ ಸರ್ಕಾರದ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಹೊನ್ನಾವರದ ಶರಾವತಿ ವೃತ್ತದಲ್ಲಿ ಹೊನ್ನಾವರ ಬಿಜೆಪಿ ಮಂಡಲ ಹಾಗೂ ಜೆಡಿಎಸ್ ವತಿಯಿಂದ ಸಿಎಂ ಸಿದ್ಧರಾಮಯ್ಯ ಪ್ರತಿಕೃತಿ ದಹಿಸಿ, ಕಾಂಗ್ರೆಸ್‌ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಶರಾವತಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಖಾಲಿ ಚೊಂಬು ಹಿಡಿದು ರಾಜ್ಯದ ಜನತೆಗೆ ಗ್ಯಾರಂಟಿ ಹೆಸರಿನಲ್ಲಿ ಮೋಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಸಿಎಂ ಸಿದ್ಧರಾಮಯ್ಯ ಪ್ರತಿಕೃತಿಗೆ ಬೆಂಕಿ ಹಚ್ಚಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ನಂತರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಪೋಲಿಸರು ಹಾಗೂ ಕಾರ್ಯಕರ್ತರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ಈ ವೇಳೆ ಹೊನ್ನಾವರ ಬಿಜೆಪಿ ಮಂಡಲದ ಅಧ್ಯಕ್ಷ ಮಂಜುನಾಥ ನಾಯ್ಕ ನುಡಿಸಿರಿ ವಾಹಿನಿಯೊಂದಿಗೆ ಮಾತನಾಡಿ, ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌ ಡಿಸೆಲ್‌ ದರ ಏರಿಕೆ ಮಾಡಿ ಜನರ ಜೀವನದ ಜೊತೆ ಚೆಲ್ಲಾಟ ಆಡ್ತಿದೆ. ಕೂಡಲೇ ಏರಿಕೆ ಮಾಡಿರುವ ಬೆಲೆಯನ್ನು ಇಳಿಕೆ ಮಾಡದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

300x250 AD

ಜೆಡಿಎಸ್‌ ತಾಲೂಕ ಘಟಕದ ಅಧ್ಯಕ್ಷ ಟಿ.ಟಿ.ನಾಯ್ಕ ಮೂಡ್ಕಣಿ ಮಾತನಾಡಿ, ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಕೊಟ್ಟಿರುವ ಗ್ಯಾರಂಟಿಗಳನ್ನು ಸರಿಯಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶ ಬಂದ ಮೇಲೆ ರಾಜ್ಯದಲ್ಲಿ ಅವರ ಬಲ ಕುಗ್ಗಿ ಹೋಗಿದೆ. ಆದ್ದರಿಂದ ಈಗ ಪೆಟ್ರೋಲ್‌ ಡಿಸೆಲ್‌ ಹಾಗೂ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಪಕ್ಷದ ದೃಷ್ಟಿಕೋನದಿಂದ ಪ್ರತಿಭಟನೆ ಮಾಡುತ್ತಿಲ್ಲ ಜನಸಾಮಾನ್ಯರಿಗೆ ಅನುಕೂಲವಾಗುವ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಹೀಗಾಗಿ ಕೂಡಲೇ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿದರು.

ಜಿ .ಪಂ ಮಾಜಿ ಸದಸ್ಯೆ ಶ್ರೀಕಲಾ ಶಾಸ್ತ್ರೀ ಮಾತನಾಡಿ, ಕಾಂಗ್ರೆಸ್‌ ಸರ್ಕಾರದ ಬಿಟ್ಟಿ ಭಾಗ್ಯಗಳು ನಮಗೆ ಬೇಡ, ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಿದ್ರೆ ಸಾಕು. ದಿನನಿತ್ಯ ಬಳಕೆ ಮಾಡುವ ವಸ್ತುಗಳ ಬೆಲೆ ಏರಿಕೆ ಮಾಡಿದ್ರೆ ಮುಂದೆ ಜೀವನ ಮಾಡುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲರೂ ದುಡಿದು ತಿಂದು ಜೀವನ ಮಾಡೋರೆ ಆದ್ರಿಂದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಹೊನ್ನಾವರ ಬಿಜೆಪಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ಹಾಗೂ ಜೆಡಿಎಸ್‌ ತಾಲೂಕ ಘಟಕದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಇನ್ನೂ ರಾಜ್ಯ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದು, ಜನಸಾಮಾನ್ಯರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಬೆಲೆ ಇಳಿಕೆ ಮಾಡುತ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

Share This
300x250 AD
300x250 AD
300x250 AD
Back to top