Slide
Slide
Slide
previous arrow
next arrow

ಲೇಖಕಿ ಡಾ.ಕಮಲಾ ಹಂಪನಾ ನಿಧನಕ್ಕೆ ಧವಳೋ ಸಾವರ್ಕರ್ ಸಂತಾಪ

300x250 AD

ಜೊಯಿಡಾ: ನಾಡಿನ ಅಗ್ರಗಣ್ಯ ಸಾಹಿತಿ,ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ ಖ್ಯಾತ ಹಿರಿಯ ಲೇಖಕಿ ನಾಡೋಜ ಡಾ.ಕಮಲಾ ಹಂಪನಾ ನಿಧನರಾದ ಸುದ್ದಿ ಕೇಳಿ ಅತೀವ ನೋವುಂಟಾಗಿದೆ,ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕ ಹಿರಿಯ ಲೇಖಕಿಯನ್ನು ಕಳೆದುಕೊಂಡಿದೆ ಎಂದು ನಂದಿಗದ್ದೆ ಗ್ರಾಮ ಪಂಚಾಯತ ಸದಸ್ಯರಾದ ಧವಳೋ ಸಾವರ್ಕರ್ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡೋಜ ಡಾ.ಕಮಲಾ ಹಂಪನಾ ಅವರು ಕನ್ನಡದ ಲೇಖಕರು, ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ.ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ.                                               
ದಿವಂಗತರ ಆತ್ಮಕ್ಕೆ ಚಿರಶಾಂತಿ ನೀಡಲಿ,ಭಗವಂತ ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ, ಸಾಹಿತ್ಯಾಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

300x250 AD
Share This
300x250 AD
300x250 AD
300x250 AD
Back to top