Slide
Slide
Slide
previous arrow
next arrow

ನೂತನ ಬಸ್ ಮಾರ್ಗಕ್ಕೆ ಶಾಸಕ ಭೀಮಣ್ಣ ಚಾಲನೆ

300x250 AD

ಸಿದ್ದಾಪುರ: ತಾಲೂಕಿನ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಆರಂಭಿಸಲಾದ ನೂತನ ಗ್ರಾಮೀಣ ಸಾರಿಗೆ ಬಸ್ ಮಾರ್ಗಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಚಾಲನೆ ನೀಡಿದರು.

ಸಿದ್ದಾಪುರ-ವಡಗೇರಿ ಹಾಗೂ ಶಿರಸಿ-ಆಡುಕಟ್ಟಾ-ಸಾಗರ ಮಾರ್ಗದ ಬಸ್ಸಿಗೆ ಶಾಸಕ ಭೀಮಣ್ಣ ನಾಯ್ಕ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಪ್ರಯಾಣಿಕರಿಗೆ ಸೂಕ್ತ ಸಾರಿಗೆ ಸಂಪರ್ಕ ಕಲ್ಪಿಸುವಂತೆ ವಾಕರಸಾ ಸಂಸ್ಥೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ಘಟಕ ವ್ಯವಸ್ಥಾಪಕ ಸರ್ವೇಶ ನಾಯ್ಕ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top