Slide
Slide
Slide
previous arrow
next arrow

ಭಾಷಣ ಸ್ಪರ್ಧೆ: ಸರಸ್ವತಿ ಪಿಯು ವಿದ್ಯಾರ್ಥಿನಿ ಭೂಮಿಕಾ ಪ್ರಥಮ

300x250 AD

ಕುಮಟಾ: ಕೆಂಪೇಗೌಡ ಜಯಂತಿ ನಿಮಿತ್ತ ನಡೆದ
ತಾಲೂಕಾ ಮಟ್ಟದ ಪದವಿಪೂರ್ವ ಕಾಲೇಜಿನ
ಭಾಷಣ ಸ್ಪರ್ಧೆಯಲ್ಲಿ ಕೊಂಕಣ ಎಜ್ಯಕೇಶನ್ ಟ್ರಸ್ಟ್ ನ ಸರಸ್ವತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ ಸತೀಶ ಭಟ್ಟ ಪ್ರಥಮ ಸ್ಥಾನ ಪಡೆದಿದ್ದಾಳೆ.

ಜೂನ್ 27ರಂದು ತಾಲೂಕಿನ ಆಡಳಿತ ಸೌಧದಲ್ಲಿ ಜರುಗುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕಾ ಆಡಳಿತದ ವತಿಯಿಂದ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಪ್ರಸಕ್ತ ಸಾಲಿನಿಂದ ಶಾಲಾ ಕಾಲೇಜುಗಳಲ್ಲಿ ನಾಡದೊರೆ ಕೆಂಪೇಗೌಡ ಜನ್ಮದಿನಾಚರಣೆ ಕಾರ್ಯಕ್ರಮ ನೆರವೇರುತ್ತಿದ್ದು, ಆ ನಿಮಿತ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆಯ ಮುಖಾಂತರ ನಡೆಸಲಾಗಿತ್ತು.
ವಿದ್ಯಾರ್ಥಿನಿಯ ಸಾಧನೆಗೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿ, ಪ್ರಾಚಾರ್ಯರು, ಉಪಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದದವರು ಶುಭಾಶಯ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top