Slide
Slide
Slide
previous arrow
next arrow

ವಿದ್ಯಾಪೋಷಕದಿಂದ ಆರ್ಥಿಕ ನೆರವು: ಅರ್ಜಿ ಆಹ್ವಾನ

300x250 AD

ಶಿರಸಿ: ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಧಾರವಾಡದ ವಿದ್ಯಾಪೋಷಕ ಸಂಸ್ಥೆಯು ನರ್ಚರ್ ಮೆರಿಟ್ ಯೋಜನೆಯಡಿಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗಾಗಿ ಆರ್ಥಿಕ ನೆರವನ್ನು ನೀಡಲು ಮುಂದಾಗಿದೆ.

10ನೇ ತರಗತಿ ನಂತರದ ಶಿಕ್ಷಣ ಮುಂದುವರಿಕೆಗಾಗಿ ಆರ್ಥಿಕ ನೆರವು ಅರ್ಜಿ ಹಾಕಲು ಅರ್ಹತೆಗಳು

• ವಿದ್ಯಾರ್ಥಿಗಳು ಪ್ರಥಮ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮಾರ್ಚ 2024ರಲ್ಲಿ ಬರೆದಿರಬೇಕು.
• ಪಿ.ಯು.ಸಿ. ಮೊದಲನೇ ವರ್ಷದ ವಾಣಿಜ್ಯ ಮತ್ತು ಕಲಾ ಕೋರ್ಸಗೆ ಸೇರಲು ಬಯಸುವ ವಿದ್ಯಾರ್ಥಿ/ನಿಯರು ಈ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
• ಎಸ್.ಎಸ್.ಎಲ್.ಸಿ.ಯನ್ನು ಮೊದಲನೇ ಪ್ರಯತ್ನದಲ್ಲಿ ಶೇ. 80% ಅಂಕ ಗಳಿಸಿದ ವಿದ್ಯಾರ್ಥಿ/ನಿಯರು ಈ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
• ಕುಟುಂಬದ ಮಾಸಿಕ ವರಮಾನ ರೂ. 10,000/- ಕ್ಕಿಂತ ಕಡಿಮೆ ಇರಬೇಕು.
• ವಿದ್ಯಾರ್ಥಿಯ ಪಾಲಕರು/ಪೋಷಕರು ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ವಿಜಯಪುರ, ಬಾಗಲಕೋಟೆ, ದಾವಣಗೆರೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ವಾಸವಿದ್ದವರಾಗಿರಬೇಕು.
• ವಿದ್ಯಾಪೋಷಕ ನರ್ಚರ್ ಮೆರಿಟ್ ಕಾರ್ಯಕ್ರಮವು ಸ್ವಯಂಸೇವಕರ ಲಭ್ಯತೆಯ ಮೇಲೆ ಅವಲಂಬಿತವಾಗಿರುತ್ತದೆ. ಕಾರಣ ಹೊಸ ಅರ್ಜಿಯನ್ನು 2024-25 ಪರಿಗಣಿಸುವುದು ಕೆಲವೊಂದು (ಸ್ವಯಂಸೇವಕರು ಲಭ್ಯವಿರುವ) ಜಿಲ್ಲಾ ಅಥವಾ ತಾಲೂಕುಗಳಿಗೆ ಮಾತ್ರ ಸೀಮಿತವಾಗಿರುತ್ತದೆ.

300x250 AD

ಅರ್ಜಿ ಸಲ್ಲಿಸುವ ವಿಧಾನ :
ಧನ ಸಹಾಯದ ಅರ್ಜಿಯು ವಿದ್ಯಾಪೋಷಕ ಸಂಸ್ಥೆಯ ಅಂತರ್ಜಾಲ http://www.vidyaposhak.ngo ದಲ್ಲಿ ಲಭ್ಯವಿದೆ. ವಿದ್ಯಾರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಅದರಲ್ಲಿ ನಮೂದಿಸಿರುವ ಮಾಹಿತಿಯನ್ನು ತುಂಬಿ ಅಗತ್ಯ ದಾಖಲಾತಿಗಳನ್ನು ಅಪ್‌ಲೋಡ್ ಮಾಡಬೇಕು.

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15, 2024ವಾಗಿದ್ದು,ಹೆಚ್ಚಿನ ಮಾಹಿತಿಗಾಗಿ ಕಛೇರಿ : ವಿಕಾಸ್ ಬಿಲ್ಡಿಂಗ್, ಗುರುನಗರ್, 4th ಕ್ರಾಸ್, LIC ಆಫೀಸ್ ಹಿಂದೆ, ಯೋಗಮಂದಿರ ರಸ್ತೆ,
ಶಿರಸಿ – 581402 ದೂರವಾಣಿ ಸಂಖ್ಯೆ : Tel:+919844830009/ Tel:+919482490343ಯನ್ನು ಸಂಪರ್ಕಿಸಿರಿ.

Share This
300x250 AD
300x250 AD
300x250 AD
Back to top