Slide
Slide
Slide
previous arrow
next arrow

ಬೃಹತ್ ಮರ ಬಿದ್ದು ಬೈಕ್ ಸವಾರನಿಗೆ ಗಾಯ

300x250 AD

ಹೊನ್ನಾವರ : ತಾಲೂಕಿನ ನಗರಬಸ್ತಿಕೇರಿ ಹೊನ್ನಾವರ ಮಾರ್ಗದಲ್ಲಿ ಬೃಹತ್ ಮರವೊಂದು ಬೈಕ್ ಸವಾರರ ಮೇಲೆ ಬಿದ್ದಿದ್ದು ಅವಘಡದಲ್ಲಿ ಬೈಕ್ ಸವಾರ ಗಾಯಾಳುವಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ತಾಲೂಕಿನ ಅನಿಲಗೋಡ ನಿವಾಸಿ, ಬೈಕ್ ಸವಾರ ಬಾಬು ನಾಯ್ಕ (52) ಗಾಯಗೊಂಡವರು. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಅವರ ಪತ್ನಿ ಭಾಗೀರಥಿ ನಾಯ್ಕ ಅದೃಷ್ಟವಶಾತ್ ಪಾರಾಗಿದ್ದಾರೆ. ನಗರಬಸ್ತಿಕೇರಿಯಲ್ಲಿ ತಮ್ಮ ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆಂದು ದಂಪತಿ ಬೈಕಿನಲ್ಲಿ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

300x250 AD

ಅದೇ ಮಾರ್ಗದಲ್ಲಿ ಬರುತ್ತಿದ್ದ ಸ್ಥಳೀಯರು, ಬೈಕ್ ಸವಾರರು ಮತ್ತು ಕಾರಿನಲ್ಲಿ ಬರುತ್ತಿದ್ದ ಭಟ್ಕಳದ ಬಿಜೆಪಿ ಮುಖಂಡರಾದ ಗೋವಿಂದ ನಾಯ್ಕ, ಶ್ರೀಕಾಂತ ನಾಯ್ಕ ಮತ್ತು ಗಣಪತಿ ಗೌಡರು ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯ ಮಾಡಿ, ಗಾಯಳುವನ್ನ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.ಇನ್ನು ಘಟನೆಯಲ್ಲಿ ರಸ್ತೆ ಪಕ್ಕದ ವಿದ್ಯುತ್ ಕಂಬಗಳು ನೆಲಕ್ಕುರುಳಿದೆ.ಮರ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ.

Share This
300x250 AD
300x250 AD
300x250 AD
Back to top