Slide
Slide
Slide
previous arrow
next arrow

ಹೊನ್ನಾವರದಲ್ಲಿ ಆಂಬ್ಯುಲೆನ್ಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

300x250 AD

ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಹೊಸಪಟ್ಟಣ ಕ್ರಾಸ್ ಹತ್ತಿರ ಆ್ಯಂಬುಲೆನ್ಸ್ ವಾಹನವೊಂದು ಪಲ್ಟಿಯಾಗಿದೆ. ಕುಮಟಾ ಕೆನರಾ ಹೆಲ್ತ್‌ಕೇರ್‌ನಿಂದ ಮಂಗಳೂರು ಶ್ರೀನಿವಾಸ ಆಸ್ಪತ್ರೆಗೆ ಪಾರ್ಶ್ವವಾಯು ತುತ್ತಾದ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ.

ಪಲ್ಟಿಯಾದ ಪರಿಣಾಮ ಪಾರ್ಶ್ವವಾಯುವಿಗೆ ತುತ್ತಾದ ಕಮಲಾ ಪಟಗಾರ ಹಾಗೂ ಅಂಬುಲೆನ್ಸ್ ಚಾಲಕ ಸೋಮನಾಥ ನಾಯ್ಕ ಇವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಂಬ್ಯುಲೆನ್ಸ್ ರಸ್ತೆ ಅಂಚಿನ ಮಣ್ಣಿನ ಮೇಲೆ ಬಿದ್ದಿರುವ ಕಾರಣ ದೊಡ್ಡ ಅನಾಹುತ ತಪ್ಪಿದೆ. ವಾಹನದಲ್ಲಿ ಕಮಲಾ ಪಟಗಾರ ಹಾಗೂ ರೋಗಿಯ ಸಂಬಂಧಿಕರು ಮತ್ತು ಚಾಲಕ ಸೇರಿ ಒಟ್ಟೂ 04 ಜನರಿದ್ದು, ನಂತರ ರೋಗಿ ಹಾಗೂ ರೋಗಿಯ ಸಂಬಂಧಿಕರನ್ನು ಬೇರೆ ಅಂಬುಲೆನ್ಸ್ ವಾಹನದಲ್ಲಿ  ಮಂಗಳೂರಿಗೆ ಕಳುಹಿಸಿಕೊಡಲಾಗಿದೆ. ಮೂರು ವರ್ಷದ ಹಿಂದೆ ಶಿರೂರಿನಲ್ಲಿ ನಡೆದ ಅಂಬ್ಯುಲೆನ್ಸ್ ಅಪಘಾತದ ಸಾವು-ನೋವು ಮಾಸುವ ಮುನ್ನವೇ ಇನ್ನೊಂದು ಅಪಘಾತವಾದಂತಾಗಿದೆ.

300x250 AD
Share This
300x250 AD
300x250 AD
300x250 AD
Back to top