Slide
Slide
Slide
previous arrow
next arrow

ಶಿಕ್ಷಕರ ಅರ್ಹತಾ ಪರೀಕ್ಷೆ :ನಿಷೇಧಾಜ್ಞೆ ಜಾರಿ

300x250 AD

ಕಾರವಾರ: ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ. 30 ರಂದು ಕಾರವಾರದ ಸೇಂಟ್. ಮೈಕಲ್ ಕಾನ್ವೆಂಟ್ ಹೈಸ್ಕೂಲ್, ಹಿಂದೂ ಹೈಸ್ಕೂಲ್, ಬಾಲ ಮಂದಿರ, ಪ್ರೌಢಶಾಲೆ, ಸರ್ಕಾರಿ ಪಿಯು ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ರಹೀಂ ಖಾನ್ ಯೂನಿಟಿ ಹೈಸ್ಕೂಲ್, ಶಿವಾಜಿ ಹೈಸ್ಕೂಲ್ ಹಾಗೂ ಶಿರಿಸಿಯ ಶ್ರೀ ಮಾರಿಕಾಂಬಾ ಪಿಯು ಕಾಲೇಜ್, ಶ್ರೀ ಮಾರಿಕಾಂಬಾ ಪಿಯು ಕಾಲೇಜ್(ಹೈಸ್ಕೂಲ್ ವಿಭಾಗ), ಆವೆ ಮರಿಯಾ ಹೈಸ್ಕೂಲ್‌ನಲ್ಲಿ ನಡೆಯಲಿದೆ.
ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ , ಶಿಕ್ಷಕರ ಅಹರ್ತಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಸಿ.ಆರ್.ಪಿ.ಸಿ ಕಾಯ್ದೆ ಕಲಂ 144 ರಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ.
ಸದರಿ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ಅಂದರೆ, ಮೊಬೈಲ್ ಫೋನಗಳು, ಸ್ಮಾರ್ಟ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್ ಗಳನ್ನು ತರಲು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top