Slide
Slide
Slide
previous arrow
next arrow

ವಿಷ್ಣುಗುಪ್ತ ವಿವಿಯಲ್ಲಿ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ: ಡಾ. ಜಯರಾಮ ಭಟ್

300x250 AD

ಶಿರಸಿ:ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಲಯವು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತಮ ರೀತಿಯ ಕೊಡುಗೆಯನ್ನು ನೀಡುತ್ತಿದೆ. ಅಲ್ಲಿನ ಶಿಕ್ಷಕ ವರ್ಗ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿದೆ ಎಂದು ಡಾ. ಜಯರಾಮ ಭಟ್ ಅವರು ಹೇಳಿದರು.

ಅವರು ಇತ್ತೀಚೆಗೆ ಗೋವಾದ ಮಡಗಾಂವ್ ನಲ್ಲಿ ನಡೆದ ಶ್ರೀರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಶ್ರೀಗಳ ಸ್ವರ್ಣ ಪಾದುಕಾ ಪೂಜೆ, ಗೋವಾ ಹವ್ಯಕ ವಲಯದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು.
ಮುಖ್ಯ ಪುರೋಹಿತರಾದ ಶ್ರೀಯುತ ವಿನಾಯಕ ಶಾಸ್ತ್ರಿಗಳು, ವಿಷ್ಣುಗುಪ್ತ ವಿಶ್ವವಿದ್ಯಾಲಯದ ವೈಶಿಷ್ಟ್ಯವನ್ನು ವರ್ಣಿಸಿದರು. ಕುಮಟಾ ಮಂಡಲದ ಅಧ್ಯಕ್ಷರಾದ ಶ್ರೀ ಸುಬ್ರಾಯ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ ಶ್ರೀ ಈಶ್ವರ ಹೆಗಡೆ ದಂಪತಿಗಳನ್ನು ಸನ್ಮಾನಿಸಲಾಯಿತು. ಸನ್ಮಾನಿತರಾದ ಈಶ್ವರ ಹೆಗಡೆ ಅವರು ಮಕ್ಕಳಿಗೆ ಕಠಿಣ ಪರಿಶ್ರಮ ಮಾಡುವಂತೆ ಸಲಹೆ ನೀಡಿ ಸ್ವರ್ಣ ಪಾದುಕೆಗಳ ಸಾನ್ನಿಧ್ಯದಲ್ಲಿ ಸನ್ಮಾನ ಸ್ವೀಕರಿಸಿದ್ದಕ್ಕೆ ಸಂತಸವನ್ನು ವ್ಯಕ್ತಪಡಿಸಿದರು.

300x250 AD

ಕಳೆದ ಮಾರ್ಚ್ ತಿಂಗಳಲ್ಲಿ 10ನೆಯ ಹಾಗೂ 12 ನೆಯ ತರಗತಿಗಳಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಮಂಡಲಮಟ್ಟದ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಹಾಗೂ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.

ವಲಯದ ಅಧ್ಯಕ್ಷ ಶ್ರೀ ಮಹಾಬಲ ಭಟ್ ಅವರು ಆರಂಭದಲ್ಲಿ ಸಭಾ ಪೂಜೆಯನ್ನು ನೆರವೇರಿಸಿದರು. ಶ್ರೀಪಾದ ಭಟ್ಟ ಅಭಿನಂದನಪತ್ರವನ್ನು ಓದಿದರು. ಗಂಗೂಬಾಯಿ ಭಟ್ ಶರ್ವಾಣಿ ಭಟ್ ಹಾಗೂ ವಾಣಿಶ್ರೀ ಭಟ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

Share This
300x250 AD
300x250 AD
300x250 AD
Back to top