Slide
Slide
Slide
previous arrow
next arrow

ಬೊಮ್ಮನಹಳ್ಳಿ ಜಲಾಶಯದಲ್ಲಿ ನೀರಿನ ಮಟ್ಟ‌ ಏರಿಕೆ : ಪ್ರವಾಹ ಮುನ್ನೆಚ್ಚರಿಕೆ

300x250 AD

ದಾಂಡೇಲಿ: ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಬೊಮ್ಮನಹಳ್ಳಿ ಜಲಾಶಯದಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗಿರುವುದರಿಂದ ಅಂಬಿಕಾನಗರ ಕೆಪಿಸಿಯ ಕಾರ್ಯನಿರ್ವಾಹಕ ಅಭಿಯಂತರರಾದ ರಾಜಶೇಖರ ಜಲಾಶಯದ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುವ ಜನರಿಗೆ ಪ್ರಕಟಣೆಯ ಮೂಲಕ ಪ್ರವಾಹದ ಮುನ್ನೆಚ್ಚರಿಕೆ ನೀಡಿದ್ದಾರೆ.

ಕಾಳಿ ನದಿ ಜಲ ವಿದ್ಯುತ್ ಯೋಜನೆಯ ಮೊದಲನೇ ಹಂತದ ಬೊಮ್ಮನಹಳ್ಳಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದಾಗಿ ಬೊಮ್ಮನಹಳ್ಳಿ ಜಲಾಶಯದ ನೀರಿನ ಮಟ್ಟವು ಸತತವಾಗಿ ಏರುತ್ತಲಿದ್ದು, ಕಡಿಮೆ ಸಾಮರ್ಥ್ಯವುಳ್ಳ ಬೊಮ್ಮನಹಳ್ಳಿ ಜಲಾಶಯದ ಗರಿಷ್ಟ ಮಟ್ಟ 438.38 ಮೀ, (ಸಮುದ್ರಮಟ್ಟದಿಂದ) ತಲುಪಲಿದೆ. ಇದಕ್ಕೆ ಪ್ರತಿಯಾಗಿ ಇಂದು ಶುಕ್ತವಾರ ಮಧ್ಯಾಹ್ನ 3 ಗಂಟೆಗೆ ಜಲಾಶಯದಲ್ಲಿ ನೀರಿನ ಮಟ್ಟ 436.54 ಮೀ ತಲುಪಿರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡುವ ಸಾಧ್ಯತೆಯಿದ್ದು, ಬೊಮ್ಮನಹಳ್ಳಿ ಜಲಾಶಯದ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುವ ಜನರು ತಮ್ಮ ಆಸ್ತಿ ಪಾಸ್ತಿ, ಜಾನುವಾರು ಹಾಗೂ ಪ್ರಾಣಹಾನಿ ಬಗ್ಗೆ ಎಚ್ಚರ ವಹಿಸಿ, ಮುಂಜಾಗೃತೆಯಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸಿದ್ಧತೆ ನಡೆಸಿಕೊಳ್ಳಬೇಕಾಗಿಯೂ ಹಾಗೂ ಜಲಾಶಯದ ಕೆಳ ಭಾಗದ ನದಿ ಪಾತ್ರದಲ್ಲಿ ಮೀನುಗಾರಿಕೆ. ದೋಣಿ ಸಂಚಾರ ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲದ ಅವಧಿಯಲ್ಲಿ ನಡೆಸಬಾರದು. ಅಜಾಗರೂಕತೆಯಿಂದ ಸಂಭವಿಸುವ ಯಾವುದೇ ಹಾನಿಯನ್ನು ಕರ್ನಾಟಕ ವಿದ್ಯುತ್ ನಿಗಮವು ಭರಿಸಲಾರದು ಎಂದು ರಾಜಶೇಖರ ಅವರು ಶುಕ್ರವಾರ ಸಂಜೆ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top