Slide
Slide
Slide
previous arrow
next arrow

ಜಿಲ್ಲೆಗೆ ಅಂತೂ ಸಿಎಂ ಸಿದ್ದರಾಮಯ್ಯ; ಅನಂತಮೂರ್ತಿ ಧ್ವನಿ ಫಲಶೃತಿ ಎಂದ ಅಭಿಮಾನಿಗಳು

300x250 AD

ಅಂಕೋಲಾ: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಗುಡ್ಡ ಕುಸಿತದಿಂದ ಆದ ಅವಘಡ ಹಾಗೂ ಜಿಲ್ಲೆಯ ಇನ್ನಿತರ ನೆರೆ ಪ್ರದೇಶದ ಗ್ರಾಮಗಳಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಭೇಟಿ ನೀಡಲಿದ್ದು, ಈ ಹಿಂದೆ ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ನಂತರ ಪತ್ರಿಕಾಗೋಷ್ಠಿ ನಡೆಸಿ ಸಿಎಂ ಅವಘಡ ಸ್ಥಳ ಹಾಗೂ ನೆರೆ ಪ್ರವಾಹದಿಂದ ಸಂಸ್ರತ್ತರಾದ ಗ್ರಾಮಗಳಿಗೆ ಭೇಟಿ ನೀಡಬೇಕೆಂದು ಆಗ್ರಹಿಸಿದ್ದರು.

ಅವರು ಈ ಹಿಂದೆ ನೆರೆ ಸಂತ್ರಸ್ತರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿ, ಕುಮಟಾದಲ್ಲಿ ಸುದ್ದಿಗೋಷ್ಠಿ ನಡೆಸಿ, ಮುಖ್ಯಮಂತ್ರಿಗಳು ಉತ್ತರಕನ್ನಡ ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತೋರಿದಂತೆ ಭಾಸವಾಗುತ್ತಿದೆ. ಅವರು ಜಿಲ್ಲೆಗೆ ಆಗಮಿಸಿ ಸಂತ್ರಸ್ತರನ್ನು ಭೇಟಿಯಾಗಿ ಕಾಳಜಿ ಕೇಂದ್ರದಲ್ಲಿರುವವರಿಗೆ ಸೂಕ್ತವಾದ ಮುಂದಿನ ನೆಲೆಯನ್ನು ಕಲ್ಪಿಸಬೇಕು ಎಂದು ಕಿಡಿಕಾರಿದ್ದರು.

300x250 AD

ಈ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಿದ್ದರಾಮಯ್ಯನವರು ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ನಾಳೆ, ಜು.21ಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಅನಂತಮೂರ್ತಿ ಹೆಗಡೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಪ್ರಕಟಿಸುತ್ತಿದ್ದಾರೆ. ಸುದ್ದಿ ಪ್ರಕಟಿಸಿದ ಪತ್ರಿಕೆಯವರಿಗೂ ಹಾಗೂ ಉತ್ತರಕನ್ನಡ ಜಿಲ್ಲೆಗೆ ಆಗಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೂ ಅನಂತಮೂರ್ತಿ ಹೆಗಡೆ ಅಭಿನಂದನೆ ಸಲ್ಲಿಸಿದ್ದಾರೆ.

Share This
300x250 AD
300x250 AD
300x250 AD
Back to top