Slide
Slide
Slide
previous arrow
next arrow

ಹಳಿಯಾಳ, ಮುಂಡಗೋಡು ಹೊರತುಪಡಿಸಿ ಎಲ್ಲಾ ಶಾಲಾ-ಕಾಲೇಜಿಗೆ ರಜೆ

300x250 AD

ಕಾರವಾರ: ಭಾರತೀಯ ಹವಾಮಾನ ಇಲಾಖೆ ತಿಳಿಸಿದಂತೆ ಜು. 28 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆಯಿದೆ. ಹೀಗಾಗಿ ಆರೇಂಜ್ ಅಲರ್ಟ್‌ ಘೋಷಿಸಲಾಗಿದ್ದು ಜಿಲ್ಲೆಯ ಹಲವು ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ.

ಬಾರೀ ಮಳೆಯಿಂದ ಹಳ್ಳಕೊಳ್ಳಗಳು ತುಂಬಿದ್ದು ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳ ಸಂಭವಿಸುವ ಸಾಧ್ಯತೆಯ ಇರುವ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾ‌ರ್ ತಿಳಿಸಿದ್ದಾರೆ.

300x250 AD

ಹೀಗಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ, ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಪದವಿ ಪೂರ್ವ ಕಾಲೇಜುಗಳಿಗೆ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಜುಲೈ 27 ರಂದು ರಜೆ ಘೋಷಿಸಿದ್ದಾರೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆಯಾ ಡಿಡಿಪಿಐ ಗೆ ಸೂಚಿಸಲಾಗಿದೆ.

Share This
300x250 AD
300x250 AD
300x250 AD
Back to top