Slide
Slide
Slide
previous arrow
next arrow

ಅಬ್ದುಲ್ ಕಲಾಂ ವಸತಿ ಶಾಲೆಗೆ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಭೇಟಿ

300x250 AD

ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗುತ್ತಿರುವ ಹಲವಾರು ಸಮಸ್ಯೆಗಳ ಕುರಿತಂತೆ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ ಪೂಜಾರಿ ಸೋಮವಾರ ಅಬ್ದುಲ್ ಕಲಾಂ ವಸತಿ ಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಸತೀಶ ಪೂಜಾರಿ ಮಕ್ಕಳಿಗೆ ಗುಣಮಟ್ಟದ ಊಟ ಉಪಹಾರವನ್ನು ನೀಡಬೇಕು. ವಾರ್ಡನ್ ಸೇರಿದಂತೆ ಸಹಾಯಕ ಸಿಬ್ಬಂದಿಗಳ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು. ಮಕ್ಕಳ ಶೈಕ್ಷಣಿಕ ಬಲವರ್ಧನೆಗೆ ಆದ್ಯತೆಯಡಿ ಕೆಲಸ ನಿರ್ವಹಿಸಬೇಕೆಂದು ಸಿಬ್ಬಂದಿಗಳಿಗೆ ಸೂಚನೆಯನ್ನು ನೀಡಿದರು.

300x250 AD

ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ ಪರಮಾನಂದ, ನಗರಸಭೆಯ ನಿಕಟ ಪೂರ್ವ ಉಪಾಧ್ಯಕ್ಷರಾದ ಸಂಜಯ ನಂದ್ಯಾಳ್ಕರ, ನಗರ ಸಭೆಯ ಹಿರಿಯ ಸದಸ್ಯೆ ಯಾಸ್ಮಿನ್ ಕಿತ್ತೂರು ಹಾಗೂ ಅಬ್ದುಲ್ ಕಲಾಂ ವಸತಿ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top