Slide
Slide
Slide
previous arrow
next arrow

ಸಿದ್ದಾಪುರ ಪ.ಪಂ.ಅಧ್ಯಕ್ಷರಾಗಿ ಚಂದ್ರಕಲಾ ನಾಯ್ಕ್, ಉಪಾಧ್ಯಕ್ಷರಾಗಿ ವಿನಯ ಹೊನ್ನೆಗುಂಡಿ

300x250 AD

ಸಿದ್ದಾಪುರ:ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿಯ ಚಂದ್ರಕಲಾ ಸುರೇಶ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ವಿನಯ ಸದಾಶಿವ ಹೊನ್ನೆಗುಂಡಿ ಇಬ್ಬರೂ ಅವಿರೋಧವಾಗಿ ಶುಕ್ರವಾರ ಆಯ್ಕೆ ಆಗಿದ್ದಾರೆ.
ಪಪಂ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ತಹಸೀಲ್ದಾರ ಎಂ.ಆರ್.ಕುಲಕರ್ಣಿ ಅಧ್ಯಕ್ಷರಾಗಿ ಚಂದ್ರಕಲಾ ಸುರೇಶ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ವಿನಯ ಸದಾಶಿವ ಹೊನ್ನೆಗುಂಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಘೋಷಣೆ ಮಾಡಿದರು.
ಪಪಂನಲ್ಲಿ 15 ಸದಸ್ಯರಿದ್ದು ಅದರಲ್ಲಿ 14 ಬಿಜೆಪಿ ಹಾಗೂ ಒಂದು ಮಾತ್ರ ಕಾಂಗ್ರೆಸ್ ಸದಸ್ಯರಿದ್ದಾರೆ. ಚುನಾವಣಾ ಪ್ರಕ್ರಿಯೆ ಸಂದರ್ಭದಲ್ಲಿ ಬಿಜೆಪಿಯ 11 ಹಾಗೂ ಕಾಂಗ್ರೆಸನ ಓರ್ವ ಸದಸ್ಯೆ ಉಪಸ್ಥಿತರಿದ್ದರು.
ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿಯ ಮಾರುತಿ ಟಿ.ನಾಯ್ಕ, ಗುರುರಾಜ್ ಶಾನಭಗ ಹಾಗೂ ನಂದನ ಬೋರಕರ್ ಹಾಜರಿರಲಿಲ್ಲ.
ಪಪಂನ ಹಿರಿಯ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್ ಹಾಗೂ ಸದಸ್ಯರು, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಮೇಸ್ತಾ, ಕಚೇರಿ ಕಾರ್ಯದರ್ಶಿ ಎಸ್.ಜಿ.ಹೆಗಡೆ ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಮುಖರು ನೂತನ ಅಧ್ಯಕ್ಷ -ಉಪಾಧ್ಯಕ್ಷರನ್ನು ಅಭಿನಂದಿಸಿದರು.

300x250 AD
Share This
300x250 AD
300x250 AD
300x250 AD
Back to top