Slide
Slide
Slide
previous arrow
next arrow

ಸಂಪೂರ್ಣ ಹದಗೆಟ್ಟ ಖಾರೆವಾಡ ರಸ್ತೆ: ದುರಸ್ತಿಗೆ ಆಗ್ರಹ

300x250 AD

ಯಲ್ಲಾಪುರ: ತಾಲೂಕಿನ ಕಿರವತ್ತಿ ಗ್ರಾ.ಪಂ ವ್ಯಾಪ್ತಿಯ ಖಾರೆವಾಡಕ್ಕೆ ಹೋಗುವ ರಸ್ತೆ ಹದಗೆಟ್ಟಿದ್ದು, ಓಡಾಟಕ್ಕೆ ಸಮಸ್ಯೆಯಾಗಿದೆ.

ಕಿರವತ್ತಿ ಗ್ರಾ.ಪಂ ವ್ಯಾಪ್ತಿಯ ಖಾರೆವಾಡದ ರಸ್ತೆ ಸಂಪೂರ್ಣ ಹದಗೆಟ್ಟ ಕಾರಣ, 4 ವರ್ಷಗಳ ಹಿಂದೆ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು. ಆದರೆ ವಿವಿಧ ಸಮಸ್ಯೆಗಳ ಕಾರಣದಿಂದ ಕಾಮಗಾರಿ ಆರಂಭವಾಗಲೇ ಇಲ್ಲ. ರಸ್ತೆ ಇನ್ನಷ್ಟು ಹದಗೆಡುತ್ತಲೇ ಇದ್ದು,ಈ ರಸ್ತೆಯಲ್ಲಿ ಓಡಾಟ ಕಷ್ಟಕರವಾಗಿದೆ. ರಸ್ತೆಯಲ್ಲಿ ಹೊಂಡ-ಗುಂಡಿಗಳು ಹಂಡಾಗಿದ್ದು, ವಾಹನ ಸವಾರರು ಪ್ರಯಾಸದಿಂದ ಹೋಗುವಂತಾಗಿದೆ. ಪ್ರತಿನಿತ್ಯ ಗ್ರಾಮಸ್ಥರು, ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಓಡಾಡಬೇಕಾಗಿದೆ. ಶೀಘ್ರ ಈ ರಸ್ತೆಯ ದುರಸ್ತಿಗೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top