Slide
Slide
Slide
previous arrow
next arrow

ಯಶಸ್ವಿಯಾಗಿ ನಡೆದ ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

300x250 AD

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಹಳಿಯಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ಗ್ರಾಪಂ ಹಾರ್ಸಿಕಟ್ಟಾ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹಾರ್ಸಿಕಟ್ಟಾ ಮತ್ತು ಸಕಿಪ್ರಾ ಶಾಲೆ ಹಳಿಯಾಳ ಇವರ ಸಹಯೋಗದಲ್ಲಿ ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಬುಧವಾರ ಊರವರ ಸಹಕಾರದಿಂದ ಯಶಸ್ವಿಯಾಗಿ ಜರುಗಿತು.

ಗ್ರಾಪಂ ಅಧ್ಯಕ್ಷೆ ಹನುಮಕ್ಕ ಭೋವಿ ಉದ್ಘಾಟಿಸಿದರು. ಎಸ್ಡಿಎಂಸಿ ಅಧ್ಯಕ್ಷ ಪ್ರೇಮಾನಂದ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.ಗ್ರಾಪಂ ಸದಸ್ಯರಾದ ಅಕ್ಷತಾ ಮಡಿವಾಳ, ಸರೋಜಾ ನಾಯ್ಕ, ಜಿಪಂ ಮಾಜಿ ಸದಸ್ಯ ಎಸ್.ಆರ್. ಹೆಗಡೆ ಕುಂಬಾರಕುಳಿ, ಸಾಮಾಜಿಕ ಕಾರ್ಯಕರ್ತ ಎಸ್.ಎನ್.ಹೆಗಡೆ ಬಕ್ಕೆಮನೆ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹಾರ್ಸಿಮನೆ, ಹಳಿಯಾಳ ಮಹಿಷಾಸುರ ಮರ್ಧಿನಿ ದೇವಾಲಯದ ಅರ್ಚಕ ಮಂಜುನಾಥ ನಾಯ್ಕ ಪೂಜಾರ ಹಳಿಯಾಳ, ಸಿಂಗಾರಪ್ರಿಯ ನಾಗಚೌಡೇಶ್ವರಿ ದೇವಾಲಯದ ಅರ್ಚಕ ಅಶೋಕ ನಾಯ್ಕ ಹಳಿಯಾಳ, ಮಂಜುನಾಥ ಮಡಿವಾಳ, ಹಿರಿಯ ಶಿಕ್ಷಕ ಡಿ.ಎಲ್.ಭಾಗ್ವತ್, ಎಚ್.ಎಸ್.ನಾಯ್ಕ, ತಾಲೂಕು ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಕೆ.ಎನ್.ಹೆಗಡೆ, ನಾಗರಾಜ ನಾಯ್ಕ, ಎಂ.ಜಿ.ನಾಯ್ಕ ಹಾಗೂ ಹಳೆಯ ವಿದ್ಯಾರ್ಥಿಸಂಘದ ಪದಾಧಿಕಾರಿಗಳಿದ್ದರು.
ಇದೇ ಸಂದರ್ಭದಲ್ಲಿ ಶಾಲೆಗೆ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ಶ್ರೀಪಾದ ಹೆಗಡೆ ಬಕ್ಕೆಮನೆ ಅವರನ್ನು ಸನ್ಮಾನಿಸಲಾಯಿತು.
ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯನ್ನು ಆಚರಿಸುತ್ತಿರುವುದು ತಾಲೂಕಿನಲ್ಲಿಯೇ ಇದೇ ಮೊದಲಶಾಲೆಯಾಗಿದೆ. ಪ್ರತಿಭಾ ಕಾರಂಜಿಯನ್ನು ಸ್ಥಳೀಯರ ಸಹಕಾರದಿಂದ ಊರಿನ ಹಬ್ಬದಂತೆ ಆಚರಿಸಿದ್ದು ವಿಶೇಷವಾಗಿತ್ತು.
ಸಿ.ಆರ್.ಪಿ.ಶೋಭಾ ಡಿ.ಸಿ. ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕ ನಾಗರಾಜ ಮಡಿವಾಳ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ನಯನಾ ನಾಯ್ಕ ವಂದಿಸಿದರು. ವಿನಾಯಕ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.

300x250 AD
Share This
300x250 AD
300x250 AD
300x250 AD
Back to top