ಕಾರವಾರ: ಇಲ್ಲಿನ ಅಂಚೆ ವಿಭಾಗದ 2021ನೇ ಸಾಲಿನ 3ನೇ ತ್ರೈಮಾಸಿಕ ಅಂಚೆ ಅದಾಲತ್ ಸೆ.27ರಂದು ಕಾರವಾರ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಬೆಳಗ್ಗೆ 11ಕ್ಕೆ ನಡೆಯಲಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿರುವ ಅಂಚೆ ಸೇವೆಗಳಿಗೆ ಸಂಬಂಧಪಟ್ಟ ಸಲಹೆ, ಸೂಚನೆ ಮತ್ತು ದೂರುಗಳನ್ನು ಅಂಚೆ ಅದಾಲತ್ನಲ್ಲಿ ವಿಚಾರಣೆಗೆ ಎಂದು ಮೇಲ್ಪರಹ ಬರೆದು ಯಾವುದೇ ಅಂಚೆ ಕಚೇರಿಯಲ್ಲಿ ರವಾನೆಗಾಗಿ ಸಲ್ಲಿಸಬಹುದು. ಇಂತಹ ಲಕೋಟೆಗೆ ಅಂಚೆ ವೆಚ್ಚ ಭರಿಸುವ ಅಗತ್ಯವಿರುವುದಿಲ್ಲ. ಅಂಚೆ ಅದಾಲತ್ನಲ್ಲಿ ಅಂಚೆ ಕಚೇರಿಗಳಿಂದ ಈಗ ಕೊಡುತ್ತಿರುವ ಸೇವೆಗಳಲ್ಲಿರುವ ಕೊರತೆಗಳನ್ನು ಮತ್ತು ಅವುಗಳನ್ನು ಸುಧಾರಿಸುವ ಸಲಹೆ ಸೂಚನೆಗಳನ್ನಷ್ಟೇ ಚರ್ಚಿಸಲಾಗುವುದು.
ಇಲಾಖೆಯ ಕಾರ್ಯನೀತಿ ಧೋರಣೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಈ ವಿಭಾಗೀಯ ಅಂಚೆ ಅದಾಲತ್ನಲ್ಲಿ ಚರ್ಚಿಸಲಾಗುವುದಿಲ್ಲ. ಇಂತಹ ಕಾರ್ಯನೀತಿ ಧೋರಣೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಬೇರೆ ಯಾವುದೇ ಸಮಯದಲ್ಲಿ ಬರೆದು ತಿಳಿಸಿದ್ದಲ್ಲಿ, ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದು ಕಾರವಾದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.