Slide
Slide
Slide
previous arrow
next arrow

ಸೆ.5,6ಕ್ಕೆ ಶ್ರೀ ವಿಘ್ನೇಶ್ವರ ವರ್ತಕರ ಗಣಪತಿ ದೇವಸ್ಥಾನ ಮೂರ್ತಿ ಪ್ರತಿಷ್ಠಾಪನೆ

300x250 AD

ದಾಂಡೇಲಿ : ನಗರದ ಬಸ್ ನಿಲ್ದಾಣದ ಹತ್ತಿರದಲ್ಲಿರುವ ಶ್ರೀ ವಿಘ್ನೇಶ್ವರ ವರ್ತಕರ ಗಣಪತಿ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವು ಸೆ: 5 ರಿಂದ 6 ರವರೆಗೆ ನಡೆಯಲಿದೆ.

ಸೆ:5 ರಂದು ಬೆಳಿಗ್ಗೆ 6 ಗಂಟೆಗೆ ವಿವಿಧ ಪೂಜಾರಾಧನೆಗಳು ಆರಂಭವಾಗಲಿದೆ. ಸೆ: 6 ರಂದು ಬೆಳಿಗ್ಗೆ 9:30 ಗಂಟೆಗೆ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ತತ್ವ ಕಲಾದಿ ಪ್ರಧಾನ ಹೋಮ ಮಹಾಪೂಜೆ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 12:30 ಗಂಟೆಗೆ ಮಹಾ ಮಂಗಳಾರತಿಯಾದ ಬಳಿಕ ಮಹಾಪ್ರಸಾದ ವಿತರಣೆ ನಡೆಯಲಿದೆ.

ಶ್ರೀ ದೇವರ ಪ್ರಾಣ ಪ್ರತಿಷ್ಠಾಪನೆ ಹಾಗೂ ವೈದಿಕ ಕಾರ್ಯಕ್ರಮಗಳು ಬೆಳಗಾವಿಯ ರಂಗನಾಥ ಭಟ್ ಅವರ ಪ್ರಧಾನ ಪೌರೋಹಿತ್ಯದಲ್ಲಿ ನಡೆಯಲಿದೆ.

300x250 AD

ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಮಹಾಗಣಪತಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ವಿಘ್ನೇಶ್ವರ ವರ್ತಕರ ಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಮನವಿಯನ್ನು ಮಾಡಿದ್ದಾರೆ.

Share This
300x250 AD
300x250 AD
300x250 AD
Back to top