Slide
Slide
Slide
previous arrow
next arrow

ರಾಜ್ಯ ಸರ್ಕಾರಿ ನಿವೃತ್ತ ನೌಕರ ಸಂಘದ ಅಧ್ಯಕ್ಷರಾಗಿ ಜಾಲಿಸತ್ಗಿ ಅಧಿಕಾರಕ್ಕೆ

300x250 AD

ಯಲ್ಲಾಪುರ: ರಾಜ್ಯ ಸರಕಾರಿ ನಿವೃತ್ತ ನೌಕರರ ಯಲ್ಲಾಪುರ ತಾಲೂಕಾ ಘಟಕದ ನೂತನ ಅಧ್ಯಕ್ಷರಾಗಿ ಎಸ್.ಎಲ್. ಜಾಲಿಸತ್ಗಿ ಅಧಿಕಾರ ಸ್ವೀಕರಿಸಿದರು.

ಮಂಗಳವಾರ ನಿರ್ಗಮಿತ ಅಧ್ಯಕ್ಷ ಶ್ರೀರಂಗ ಕಟ್ಟಿಯವರು ಅಧಿಕಾರ ಹಸ್ತಾಂತರ ಮಾಡಿ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ ಶುಭ ಕೋರಿದರು. ತಮ್ಮ ಅಧಿಕಾರ ಅವಧಿಯಲ್ಲಿ ಸಂಘದಿಂದ ಕೈಗೊಳ್ಳಲಾದ ಚಟುವಟಿಕೆಗಳ ವಿವರ ನೀಡಿ ನಿವೃತ್ತ ನೌಕರರು ಸದಾ ಚಟುವಟಿಕೆಯಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಅವರು ಕರೆ ನೀಡಿದರು.

300x250 AD

ಸುರೇಶ ಬೋರಕರ, ಆರ್.ಎನ್.ನಾಯ್ಕ ಮತ್ತು ಶ್ರೀಮತಿ ಶೋಭಾ ಶೆಟ್ಟಿ ಸಂಘದ ಉಪಾಧ್ಯಕ್ಷರಾಗಿ ಪದಗ್ರಹಣ ಮಾಡಿದರು. ನಿರ್ಗಮಿತ ಕಾರ್ಯದರ್ಶಿ ಸುರೇಶ ಬೋರಕರ ತಮ್ಮ ಅಧಿಕಾರಾವಧಿಯಲ್ಲಿನ ಜಮಾ- ಖರ್ಚಿನ ವಿವರ ನೀಡಿದರು. ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಕೆ.ಕೆ.ನಾಯ್ಕ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ನೂತನ ಕಾರ್ಯದರ್ಶಿ ಗೋಪಾಲ ನೇತ್ರೇಕರ ವಂದಿಸಿದರು. ಈ ಸಂದರ್ಭದಲ್ಲಿ ಎಂಟು ನಿವೃತ್ತ ನೌಕರರು ಸಂಘದ ಸದಸ್ಯತ್ವ ಪಡೆದರು.

Share This
300x250 AD
300x250 AD
300x250 AD
Back to top