Slide
Slide
Slide
previous arrow
next arrow

ಸೆ.22ಕ್ಕೆ ರಾಮನಗುಳಿ ಸಹಕಾರ ಸಂಘದ ವಾರ್ಷಿಕ ಸಭೆ: ಬಿಳ್ಕೊಡುಗೆ ಸಮಾರಂಭ

300x250 AD

ಅಂಕೋಲಾ: ಜಿಲ್ಲೆಯ ಪ್ರಮುಖ ಸಹಕಾರಿ ಸಂಸ್ಥೆಗಳಲ್ಲೊಲ್ಲಾಂದ ಅಂಕೋಲಾ ತಾಲೂಕಿನ ರಾಮನಗುಳಿ ಗ್ರೂಪ್ ಸೇವಾ ಸಹಕಾರಿ ಸಂಘದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ, ವಾರ್ಷಿಕ ಸರ್ವ ಸಾಧಾರಣ ಸಭೆ ನಡೆಯಲಿದೆ.
ಸೆ.2²ರಂದು ಬೆಳಿಗ್ಗೆ 11 ಗಂಟೆಗೆ ಸಂಘದಲ್ಲಿ 37 ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಕರಾಗಿ ಕಾರ್ಯ ನಿರ್ವಹಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ಎಸ್.ಎನ್.ಹೆಗಡೆ ಹಳವಳ್ಳಿ ಇವರಿಗೆ ಬೀಳ್ಕೊಡುಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರು,ಶಾಸಕರಾಗಿರುವ ಶಿವರಾಮ ಹೆಬ್ಬಾರ್ ಘನ ಉಪಸ್ಥಿತರಿರುತ್ತಾರೆ.ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾಗಿರುವ ಗೋಪಾಲಕೃಷ್ಣ ವೈದ್ಯ, ವಹಿಸುವರು.ಕೆಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿರುವ ಬೀರಣ್ಣ ನಾಯಕ, ಜಿ.ಕೆ.ಭಟ್ಟ ಪ್ರಭಾರೆ ಸಹಕಾರ ಸಂಘಗಳ ಉಪನಿಬಂಧಕರು ಕಾರವಾರ, ಕೆ,ಡಿ,ಸಿ,ಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಕಾಂತ ಭಟ್ಟ ಭಾಗವಹಿಸುವರು, ನಂತರ ಮದ್ಯಾಹ್ನ 3 ಗಂಟೆಗೆ ವಾರ್ಷಿಕ ಸರ್ವ ಸಾಧಾರಣ ಸಭೆ ನಡೆಯಲಿದೆ. ಆಧುನಿಕ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳು ಕೂಡಾ ಕಾರ್ಯಕ್ರಮದಲ್ಲಿ ಇರುತ್ತದೆ , ಎಂದು ಆಡಳಿತ ಮಂಡಳಿಯ ಪರವಾಗಿ ಪ್ರಭಾರಿ ಮುಖ್ಯ ಕಾರ್ಯ ನಿರ್ವಾಹಕರಾದ ರವಿಂದ್ರ ವೈದ್ಯ ರವರು ಪತ್ರಿಕಾಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top