Slide
Slide
Slide
previous arrow
next arrow

ಸಿದ್ದಾಪುರದಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನ

300x250 AD

ಸಿದ್ದಾಪುರ: ಸ್ವಚ್ಛತೆಯೇ ಸೇವೆ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ರಮ ಪಟ್ಟಣದಲ್ಲಿ ವಿವಿಧ ಇಲಾಖೆಯ ಸಹಕಾರದೊಂದಿಗೆ ಶುಕ್ರವಾರ ಜರುಗಿತು.
ಸ್ಥಳೀಯ ತಹಸೀಲ್ದಾರ ಕಚೇರಿಯ ಹೊರ ಆವರಣದಲ್ಲಿ ಸಿದ್ದಾಪುರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಭರತ ಚಂದ್ರ ಕೆ.ಎಸ್. ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸ್ವಚ್ಛತೆಯ ಮಹತ್ವವನ್ನು ತಿಳಿಸಿದರು.

ನಂತರ ತಹಸೀಲ್ದಾರ ಕಚೇರಿಯಿಂದ ಹೊಸಬಸ್ ನಿಲ್ದಾಣ, ತಿಮ್ಮಪ್ಪ ನಾಯಕ ವೃತ್ತದವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎಂ.ನಾಯ್ಕ, ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ಪಪಂ ಮುಖ್ಯಾಧಿಕಾರಿ ಜಗದೀಶ ಆರ್.ನಾಯ್ಕ, ಪಿ ಕುಮಾರ ಕೆ, ಸಿಡಿಪಿಒ ಪೂರ್ಣಮಾ ಆರ್, ತಾಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮಿಕಾಂತ ನಾಯ್ಕ, ಕಂದಾಯ, ನ್ಯಾಯಾಲಯ, ಅರಣ್ಯ, ಪಪಂ,ತಾಪಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top