Slide
Slide
Slide
previous arrow
next arrow

ನವರಾತ್ರಿ ಪ್ರಯುಕ್ತ ಮಡಿಕೇರಿ ಶಾಲೆಯಲ್ಲಿ ಶಾರದಾ ಪೂಜೆ

300x250 AD

ಭಟ್ಕಳ: ತಾಲೂಕಿನ ಬೈಲೂರು ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಿಕೇರಿಯಲ್ಲಿ ನವರಾತ್ರಿಯ ನಿಮಿತ್ತ ಶಾರದಾ ಪೂಜೆಯನ್ನು ವರ್ಷಂಪ್ರತಿ ನಡೆಯುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಶಿಕ್ಷಕ ವೃಂದದ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಆಚಾರಿಕೇರಿಯಿಂದ ಶಾರದಾ ಮೂರ್ತಿಯನ್ನು ಮೆರವಣಿಗೆ ಮೂಲಕ ತಂದು ಅರ್ಚಕರ ಸಮ್ಮುಖದಲ್ಲಿ ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳು ನಡೆದವು. ಶಾಲೆಗೆ ಅವಶ್ಯವಿರುವ ಸ್ಮಾರ್ಟ್ ಕ್ಲಾಸ್‌ನ್ನು ದಾನಿಗಳ ಮೂಲಕ ದೇಣಿಗೆ ನೀಡಲು ಶಾಲಾ ಮುಖ್ಯಾಧ್ಯಾಪಕಿ ಶ್ರೀಮತಿ ಮಾದೇವಿ ಟಿ. ಹರಿಕಾಂತ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಭಿಕರಲ್ಲಿ ವಿನಂತಿಕೊಂಡರು. ಹಾಗೂ ತಮ್ಮ ಸ್ವಂತ ಖರ್ಚಿನಿಂದ ಶಾಲೆಗೆ ಗೇಟ್ ಮಾಡಿಸಿ ಎಸ್‌ಡಿಎಂಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

300x250 AD

ಈ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಮಂಜುನಾಥ ಆಚಾರ್ಯ, ಸಹ ಅಧ್ಯಾಪಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top