Slide
Slide
Slide
previous arrow
next arrow

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ: ಮನೆಗೆ ನುಗ್ಗಿದ ನೀರು

300x250 AD

ಬನವಾಸಿ: ಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದ್ದು, ತಾವು ಬೆಳೆದ ಬೆಳೆ ಮಳೆಯಿಂದಾಗಿ ನೀರು ಪಾಲಾಗುತ್ತಿದೆ.

ಸೋಮವಾರ ಸುರಿದ ಮಳೆಗೆ ಸಮೀಪದ ಭಾಶಿ ಗ್ರಾಮದ ಪಾರ್ವತಿ ಕುಬೇರ ಮಡಿವಾಳ ಎಂಬುವವರ ಮನೆಗೆ ಮಳೆ ನೀರು ನುಗ್ಗಿದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳಿಗೆ ಹಾನಿ ಉಂಟಾಗಿದೆ. ಭಾರಿ ಮಳೆಯಿಂದಾಗಿ ಮನೆ ಪಕ್ಕದ ಚರಂಡಿಯಲ್ಲಿ ಅಪಾರ ಪ್ರಮಾಣದ ಮಳೆ ನೀರು ಹರಿದು ಬಂದಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಪಾರ್ವತಿ ಕುಬೇರ ಮಡಿವಾಳ ಅವರಿಗೆ ಗ್ರಾಮ ಪಂಚಾಯತಿಯಿಂದ ಮನೆ ಮಂಜೂರು ಆಗಿದ್ದು ಮನೆ ನಿರ್ಮಾಣಕ್ಕೆ ಕೆಲವರು ತಕರಾರು ಮಾಡುತ್ತಿರುವುದರಿಂದ ಮನೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಮಳೆಗಾಲದಲ್ಲಿ ಇಂತಹ ಸಮಸ್ಯೆಯನ್ನು ಎದುರಿಸಬೇಕಾಗಿದೆ. ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ನನಗೆ ನ್ಯಾಯ ಒದಗಿಸಬೇಕೆಂದು ವೃದ್ದೆ ಅಳಲು ತೊಡಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top